ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ. ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. […]readmore
ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ಗ್ರೌಂಡ್ ಜೀರೋ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಮ್ರಾನ್ ಕಳೆದ ಮೂರು ದಿನಗಳಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದಾರೆ. ಎರಡು ದಿನಗಳಿಂದ ಕಾಶ್ಮೀರದಲ್ಲಿ ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ಇಮ್ರಾನ್ ಹಶ್ಮಿ ಮೇಲೆ ಏಕಾ ಏಕಿ ದಾಳಿ ನಡೆದಿದ್ದು ಘಟನೆಯಿಂದ ಇಮ್ರಾನ್ ಅಘಾತಗೊಂಡಿದ್ದಾರೆ. ಗ್ರೌಂಡ್ ಜೀರೋ ಸಿನಿಮಾದ ಶೂಟಿಂಗ್ ಕಾಶ್ಮೀರದ ಪಹಲ್ಗಾಂನಲ್ಲಿ ನಡೆಯುತ್ತಿದೆ. ಎರಡನೇ ದಿನದ ಶೂಟಿಂಗ್ ಮುಗಿಸಿಕೊಂಡ ಇಮ್ರಾನ್ ಕಾಶ್ಮೀರದ ಪಹಲ್ಗಾಂ ಮಾರುಕಟ್ಟೆಗೆ ತೆರಳಿದ್ದಾರೆ. ಈ […]readmore
ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಕೃತಿ ಕರಬಂಧ ಸದ್ಯ ಹಿಂದಿ ಹಾಗೂ ದಕ್ಷಿಣ ಭಾರತದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಸದ್ದು ಮಾಡುತ್ತಿರುವಾಗ್ಲೆ ಕೃತಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಗೂಗ್ಲಿ ಹುಡುಗಿ ಮದುವೆಯಾಗುತ್ತಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ 2010ರಲ್ಲಿ ತೆರೆಕಂಡ ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೃತಿ ಕರಬಂಧ ಬಳಿಕ ಪ್ರೇಮ್ ಅಡ್ಡ, ಸೂಪರ್ ರಂಗ, ಸೂಪರ್ ರಂಗ, ಗೂಗ್ಲಿ […]readmore
ಕಳೆದ ಕೆಲ ದಿನಗಳಿಂದ ತಮಿಳು ನಟಿ ಹಾಗೂ ನಿರೂಪಕಿ ಮಹಾಲಕ್ಷ್ಮೀ ಹಾಗೂ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಮದುವೆಯ ಕುರಿತಾಗಿ ಸಾಕಷ್ಟು ಸದ್ದು ಮಾಡ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಗೆ ಒಳಗಾಗಿದ್ದ ದಂಪತಿಗಳು ಯಾವುದಕ್ಕೂ ಕ್ಯಾರೆ ಎನ್ನದೆ ಹೊಸ ಜೀವನ ಎಂಜಾಯ್ ಮಾಡ್ತಿದ್ದಾರೆ.ಇದೀಗ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದು ಸಖತ್ ವೈರಲ್ ಆಗಿದೆ. ಮಹಾಲಕ್ಷ್ಮೀ ಅವರನ್ನು ಮದುವೆಯಾದ ಬಳಿಕ ರವೀಂದರ್ ಚಂದ್ರಶೇಖರ್ ಸೋಷಿಯಲ್ ಮೀಡಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ […]readmore
ಬಾಹುಬಲಿ ಸಿನಿಮಾದ ಮೂಲಕ ದೇಶ ವಿದೇಶದಲ್ಲಿ ಸಖತ್ ಸದ್ದು ಮಾಡಿದ್ದ ನಟಿ ಪ್ರಭಾಸ್ ಇದೀಗ ಮದುವೆಯ ವಿಷಯವಾಗಿ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಪ್ರಭಾಸ್ ಹಾಗೂ ಅನುಷ್ಕಾ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬಂದಿತ್ತು. ಆದರೆ ಅದ್ಯಾಕೋ ಈ ಜೋಡಿ ಹಸೆ ಮಣೆ ಏರಲೇ ಇಲ್ಲ. ಈ ಮಧ್ಯೆ ಪ್ರಭಾಸ್ ಮತ್ತೊಬ್ಬ ಸ್ಟಾರ್ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಸುದ್ದಿ ಕೇಳಿ ಬರ್ತಿದೆ. ಆಕೆಯ ಬೇರ್ಯಾರು ಅಲ್ಲ ನಟಿ ಕೃತಿ ಸನೋನ್. ಸದ್ಯ ಪ್ರಭಾಸ್ […]readmore
ದಕ್ಷಿಣ ಭಾರತದ ಖ್ಯಾತ ನಟಿ, ಸೆನ್ಸೇಷನ್ ಸ್ಟಾರ್ ಸಮಂತಾ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದೇ ಕಾರಣಕ್ಕೆ ಸಾರ್ವಜನಿಕ ಕಾರ್ಯಕ್ರಮ ಹಾಗೂ ಸಾಮಾಜಿಕ ಜಾಲಾ ತಾಣಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಅನಾರೋಗ್ಯದ ಸುದ್ದಿ ಹರಿದಾಡುತ್ತಿದ್ದರು ಸಮಂತಾ ಮಾತ್ರ ಯಾವುದೇ ರಿಯಾಕ್ಷನ್ ನೀಡಿಲ್ಲ. ಸದ್ಯ ಸಮಂತಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಸಭೆ, ಸಮಾರಂಭದಿಂದ ದೂರವಿರಲು […]readmore
ಬಿಗ್ ಬಾಸ್ ವಿನ್ನರ್, ಸ್ಯಾಂಡಲ್ ವುಡ್ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಇದೀಗ ನಾಯಕನಾಗಿಯೂ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಚಂದನ್ ಶೆಟ್ಟಿಗೆ ಹೆಚ್ಚು ಹೆಚ್ಚು ಆಫರ್ ಗಳು ಬರ್ತಿದ್ದು ಸಿನಿಮಾಗಳಿಗೆ ಸಂಗೀತ ನೀಡುವುದರ ಜೊತೆಗೆ ಗಾಯಕನಾಗಿಯೂ ಚಂದನ್ ಸಖತ್ ಬ್ಯುಸಿಯಾಗಿದ್ದಾರೆ.ಈ ಮಧ್ಯೆ ಮತ್ತೊಂದು ಸಿನಿಮಾಗೆ ಚಂದನ್ ನಾಯಕನಾಗಿದ್ದಾರೆ. ಸದ್ಯ ಚಂದನ್ ಶೆಟ್ಟಿ ಎಲ್ರ ಕಾಲೆಳಿಯುತ್ತೆ ಕಾಲ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ […]readmore
ಯೋಗರಾಜ್ ಭಟ್ ನಿರ್ದೇಶನದ ಪಂಚರಂಗಿ ಸಿನಿಮಾದಲ್ಲಿ ನಟಿಸಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ನಟ ದಿಗಂತ್ ಹಾಗೂ ನಟಿ ನಿಧಿ ಸುಬ್ಬಯ್ಯ 12 ವರ್ಷಗಳ ಬಳಿಕ ಮತ್ತೆ ಒಂದಾಗ್ತಿದ್ದಾರೆ. ಸಮರ್ಥ್ ಬಿ ಕಡಕೋಳ್ ನಿರ್ದೇಶದನ ಎಡಗೈ ಅಪಘಾತಕ್ಕೆ ಕಾರಣ ಚಿತ್ರದಲ್ಲಿ ಮತ್ತೆ ದಿಗಂತ್ ಹಾಗೂ ನಿಧಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಿಧಿ ಸುಬ್ಬಯ್ಯ ಬಿಗ್ ಬಾಸ್ ಗೆ ಎಂಟ್ರಿಕೊಟ್ಟ ಬಳಿಕ ಮತ್ತೆ ಆಕ್ಟೀವ್ ಆಗಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ […]readmore
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]readmore
ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ […]readmore
