ವಿಕ್ಟರಿ, ಅಧ್ಯಕ್ಷ, ಮುಕುಂದ ಮುರಾರಿ ಸೇರಿದಂತೆ ಕನ್ನಡದ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಂದ ಕಿಶೋರ್ ಸದ್ಯ ರಾಣಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ನಂದಕಿಶೋರ್ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಿನಿಮಾ ಮಾಡಲಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಸ್ವತಃ ಮೋಹನ್ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸಲು ಎಕ್ಸೈಟ್ ಆಗಿದ್ದೇನೆ ಎಂದು ಬರೆದಿದ್ದಾರೆ. ನಂದಕಿಶೋರ್ ಹಾಗೂ ಮೋಹನ್ ಲಾಲ್ ಕಾಂಬಿನೇಷನ್ ನ ಸಿನಿಮಾಗೆ ವೃಷಭ ಎಂದು […]readmore
ಸಮಂತಾ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರವಾದ ‘ಯಶೋದಾದ ಟೀಸರ್ ಸೆ. 09ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಇದಕ್ಕೂ ಮುನ್ನ, ಬಿಡುಗಡೆಯಾದ ಚಿತ್ರದ ಸ್ನೀಕ್ ಪೀಕ್, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಈಗ ನಿರ್ದೇಶಕರಾದ ಹರಿ-ಹರೀಶ್ ಈ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ಎದೆಬಡಿತ ಹೆಚ್ಚಿಸುವುದಕ್ಕೆ ಸಿದ್ಧರಾಗಿದ್ದಾರೆ. ಈಗಾಗಲೇ ಟೀಸರ್ ಬಿಡುಗಡೆ ಘೋಷಣೆ ಪೋಸ್ಟರ್ ಬಿಡುಗಡೆಯಾಗಿದ್ದು, ಈ ಪೋಸ್ಟರ್ ವೀಕ್ಷಕರ ಗಮನಸೆಳೆದಿದೆ. ‘ಯಶೋದಾ’ ಚಿತ್ರವು ಮೂಡಿಬಂದಿರುವ ಬಗ್ಗೆ ಖುಷಿಯಾಗಿರುವ ಶ್ರೀದೇವಿ ಮೂವೀಸ್ನ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ […]readmore
ಪುರಿ ಜಗನ್ನಾಥ್ ನಿರ್ದೇಶನದ, ವಿಜಯ್ ದೇವರಕೊಂಡ ನಟನೆಯ ಬಹುನಿರೀಕ್ಷಿತ ಸಿನಿಮಾ ಲೈಗರ್ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಾಗಿದೆ. ಸಿನಿಮಾ ವಿಮರ್ಶೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಕಲೆಕ್ಷನ್ ನಲ್ಲೂ ಡಲ್ ಹೊಡೆದಿದೆ. ಅಂದ ಲೈಗರ್ ಬಾಕ್ಸರ್ ಕಥೆಯಾಧಾರಿತ ಸಿನಿಮಾವಾಗಿದ್ದು ಚಿತ್ರದ ಕೊನೆಯಲ್ಲಿ ಮೈಕ್ ಟೈಸನ್ ಎಂಟ್ರಿಕೊಡುತ್ತಾರೆ. ಇದಕ್ಕಾಗಿ ಟೈಸನ್ ಪಡೆದುಕೊಂಡಿರುವ ಸಂಭಾವನೆ ಹುಬ್ಬೇರಿಸುವಂತೆ ಮಾಡಿದೆ. ಬಾಕ್ಸಿಂಗ್ ಲೋಕದಲ್ಲಿ ಟೈಸನ್ ದೊಡ್ಡ ಮಟದಲ್ಲಿ ಹೆಸರು ಮಾಡಿದ್ದಾರೆ. ಜೊತೆಗೆ ಲೈಗರ್ ಕೂಡ ಬಾಕ್ಸಿಂಗ್ ಕಥೆಯಾಧಾರಿಸಿ ಸಿನಿಮಾ ಆಗಿರೋ ಕಾರಣಕ್ಕೆ ರಿಯಲ್ […]readmore
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಗಣೇಶ ಹಬ್ಬದ ಸಂಭ್ರಮದಲ್ಲಿರುವ ಕಿಚ್ಚನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೇಳಿ ಬಂದಿದೆ. ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಈ ಹಿಂದೆ ಡಾ.ವಿಷ್ಣುವರ್ಧನ್ ಅವರ ಅಂಚೆ ಲಕೋಟೆ ತರಲು ಶ್ರಮಿಸಿದ್ದ ಡಾ.ವಿಷ್ಣು ಸೇನಾಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರೇ, ಇದೀಗ ಸುದೀಪ್ ಅಂಚೆ ಲಕೋಟೆಯನ್ನು ಹೊರ ತರಲು ಶ್ರಮಿಸಿದ್ದಾರೆ. ಭಾರತ ಸರ್ಕಾರದ ಅಂಚೆ ಇಲಾಖೆಯು […]readmore
ಅಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಾಯ್ಕಾಟ್ ಗೆ ಬಲಿಯಾಗಿದೆ. ಸಿನಿಮಾ ಸೋಲುತ್ತಿದ್ದಂತೆ ಅದರ ಲೆಕ್ಕಾಚಾರಗಳು ಶುರುವಾಗಿದೆ. ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ನಟನೆಯ ಜೊತೆಗೆ ನಿರ್ಮಾಪಕರು ಆಗಿರುವ ಅಮೀರ್ ಖಾನ್ ಚಿತ್ರದಿಂದ ಎಷ್ಟು ಕಳೆದುಕೊಂಡಿದ್ದಾರೆ ಎಂಬ ಅಂದಾಜು ಸಿಕ್ಕಿದೆ. ಸುಮಾರು 180 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಸಿನಿಮಾ ಅಂದುಕೊಂಡ ಮಟ್ಟಿಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿಲ್ಲ. ಹಾಕಿದ ಬಂಡವಾಳ ಕೂಡ ವಾಪಸ್ […]readmore
ಶಾಸಕ ಜಮೀರ್ ಅಹ್ಮದ್ ಖಾನ್ ಸುಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಈಗಾಗ್ಲೆ ಪೋಸ್ಟರ್, ಟ್ರೈಲರ್ ಹಾಗೂ ಹಾಡುಗಳಿಂದ ಗಮನ ಸೆಳೆದ ಬನಾರಸ್ ಸಿನಿಮಾ ತೆರೆಗೆ ಬರೋಕೆ ಸಿದ್ದವಾಗಿದೆ. ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ನವೆಂಬರ್ 4ರಂದು ಅದ್ದೂರಿಯಾಗಿ ತೆರೆಗೆ ಬರೋಕೆ ಸಿದ್ದವಾಗಿದೆ. ಬನಾರಸ್ ಸಿನಿಮಾದ ಮೂಲಕ ಮೊದಲ ಭಾರಿಗೆ ನಾಯಕನಾಗಿ ಝೈದ್ ಖಾನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಸಾಮಾನ್ಯವಾಗಿ […]readmore
ಇಂದು ಗಣೇಶ ಹಬ್ಬದ ಸಂಭ್ರಮ. ವಿವಿಧ ರೂಪದಲ್ಲಿ ಗಣೇಶನನ್ನು ಕೂರಿಸಿ ಭಕ್ತರು ಪೂಜೆ ಸಲ್ಲಿಸುತ್ತಾರೆ. ಸಿನಿಮಾ ಶೈಲಿಯಲ್ಲೂ ಗಣೇಶ ಮೂರ್ತಿಯನ್ನು ತಯಾರಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಇದೀಗ ಪುಷ್ಪ ಸಿನಿಮಾದ ಸ್ಟೈಲ್ ನಲ್ಲಿ ಗಣಪತಿಯನ್ನು ತಯಾರಿಸಿದ್ದು ಕೆಲ ಅಭಿಮಾನಿಗಳು ಅಸಮಧಾನ ಹೊರ ಹಾಕಿದ್ದಾರೆ. ಕರ್ನಾಟದಲ್ಲಿ ಪುನೀತ್ ರಾಜ್ ಕುಮಾರ್ ರೀತಿಯಲ್ಲಿ ಗಣೇಶನನ್ನು ನಿರ್ಮಿಸಲಾಗಿದ್ದು ಅಭಿಮಾನಿಗಳು ಅಪ್ಪು ಗಣೇಶನನ್ನು ನೋಡಿ ಪುಲ್ ಖುಷಿ ಪಟ್ಟಿದ್ದಾರೆ. ಗಣೇಶನ ಜೊತೆ ಕುಳಿತಿರುವ ಪುನೀತ್ ರಾಜ್ ಕುಮಾರ್, ಕನ್ನಡದ ಕೋಟ್ಯಾಧಿಪತಿಯ ರೀತಿಯಲ್ಲಿರುವ ಗಣೇಶ ಹೀಗೆ […]readmore
ಒಂದಲ್ಲ ಒಂದು ವಿವಾದಗಳಿಂದಲೇ ಬಿಟೌನ್ ನಲ್ಲಿ ಕುಖ್ಯಾತಿ ಘಳಿಸಿರುವ ನಟ ಕಂ ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಸದ್ಯ ಪೊಲೀಸರ ಬಂಧನದಲ್ಲಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಮುಂಬೈ ಪೊಲೀಸರು ಕಮಾಲ್ ಖಾನ್ ರನ್ನು ಬಂಧಿಸಿದ್ದಾರೆ. ದುಬೈಗೆ ತೆರಳಿದ್ದ ಕಮಾಲ್ ಖಾನ್ ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಮಧ್ಯೆ […]readmore
ಹಬ್ಬಗಳು ಬಂದ್ರೆ ಸಿನಿಮಾ ರಂಗದಲ್ಲಿ ಸುಗ್ಗಿ ಶುರುವಾಗುತ್ತೆ. ಹೊಸ ಹೊಸ ಸಿನಿಮಾಗಳ ಅನೌನ್ಸ್, ಪೋಸ್ಟರ್ ರಿಲೀಸ್, ಸಾಂಗ್, ಟ್ರೈಲರ್ ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಸಿನಿಮಾಗಳು ಸುದ್ದಿ ಮಾಡುತ್ತವೆ. ಅಂತೆಯೇ ಪುನೀತ್ ಅಭಿಮಾನಿಗಳಿಗಾಗಿ ಗಂಧದ ಗುಡಿ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಗಣೇಶ ಹಬ್ಬ ಆಚರಿಸಲು ಪುನೀತ್ ನಮ್ಮೊಂದಿಗಿಲ್ಲ ಎಂಬ ನೋವು ಪ್ರತಿಯೊಬ್ಬರನ್ನು ಕಾಡುತ್ತಿದೆ. ಅಪ್ಪು ಅವರಲ್ಲಿ ದೇವರನ್ನು ಕಾಣುತ್ತಿದ್ದ ಅಭಿಮಾನಿಗಳ ಗಣೇಶ ಜೊತೆ ಪುನೀತ್ ಅವರನ್ನು ಕೂರಿಸಿ ಪೂಜಿಸುತ್ತಿದ್ದಾರೆ. ಇದೀಗ ಗಣೇಶ ಹಬ್ಬದ […]readmore
ಕನ್ನಡದ ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದಾರೆ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ನೆಲೆಸಿರುವ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಿದ್ದು, ಅದರ ಉದ್ಘಾಟನೆಗೆ ಬೊಮ್ಮಾಯಿ ಅವರನ್ನು ಆಹ್ವಾನಿಸಿದ್ದಾರೆ. ಈ ಹಿಂದೆ ಸಣ್ಣದೊಂದು ಆಸ್ಪತ್ರೆ ಕಟ್ಟಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಇದೀಗ ಪ್ರಾಥಮಿಕ ಚಿಕಿತ್ಸಾ ಕೇಂದ್ರವನ್ನು ಕಟ್ಟಿದ್ದಾರೆ. ಚೆನೈ ನಲ್ಲಿ […]readmore
