ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್ ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ ಸಿನಿಮಾ ನಿರ್ದೇಶಿಸ್ತಿದ್ದ ತರುಣ್ […]readmore
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಇದೀಗ ಆರ್ಯವರ್ಧನ್ ಪಾತ್ರಧಾರಿ ನಟ ಅನಿರುದ್ಧ್ ಹೊರ ಹೋಗಿದ್ದಾರೆ. ಹೀಗಾಗಿ ಆರ್ಯವರ್ಧನ್ ಪಾತ್ರಕ್ಕೆ ಧಾರಾವಾಹಿ ತಂಡ ಉತ್ತಮ ನಟನನ್ನೇ ಹುಟುಕಾಟ ಮಾಡುತ್ತಿದೆ. ಸದ್ಯ ಅನಿರುದ್ಧ್ ರಿಂದ ತೆರವಾಗಿರುವ ಆರ್ಯವರ್ಧನ್ ಜಾಗಕ್ಕೆ ನಟ ಹರೀಶ್ ರಾಜ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಮೊದಲು ಆರ್ಯವರ್ಧನ್ ಪಾತ್ರಕ್ಕೆ ನಿರ್ದೇಶಕ ಅನೂಪ್ ಭಂಡಾರಿಯನ್ನು ಧಾರಾವಾಹಿ ತಂಡ ಅಪ್ರೋಚ್ ಮಾಡಿತ್ತು. ಆದರೆ ಅನೂಪ್ ಸಿನಿಮಾದ ಕೆಲಸದ ಕೆಲಸದಲ್ಲಿ ತೊಡಗಿಕೊಂಡ […]readmore
ಕಮಲ್ ಹಾಸನ್ ನಟನೆಯ ಬಹು ನಿರೀಕ್ಷಿತ ಇಂಡಿಯನ್ 2 ಸಿನಿಮಾದ ಚಿತ್ರೀಕರಣ ಕೆಲವೊಂದು ಕಾರಣಗಳಿಂದ ವಿಳಂಭವಾಗಿತ್ತು. ಕೆಲ ಭಾಗಗಳನ್ನು ಚಿತ್ರೀಕರಿಸಿದ್ದ ಚಿತ್ರತಂಡ ಅರ್ಧಕ್ಕೆ ನಿಲ್ಲಿಸಿತ್ತು. ಇದೀಗ ಎರಡು ವರ್ಷಗಳಿಂದ ನಿಂತಿದ್ದ ಇಂಡಿಯನ್ 2 ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು ಕಮಲ್ ಹಾಸನ್ ರ ಹೊಸ ಲುಕ್ ರಿವೀಲ್ ಮಾಡುವ ಮೂಲಕ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಅಂದುಕೊಂಡಂತೆ ಆಗಿದ್ದಿದ್ದರೆ ಇಷ್ಟರಲ್ಲಾಗಲೇ ಸಿನಿಮಾ ಕಂಪ್ಲೀಟ್ ಆಗಬೇಕಿತ್ತು. ಆದರೆ ಚಿತ್ರೀಕರಣ ಸಂದರ್ಭದಲ್ಲಿ ಸೆಟ್ ನಲ್ಲಿ ಕ್ರೇನ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. […]readmore
ಓ ಮೈ ಲವ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟ ಶಶಿಕುಮಾರ ಪುತ್ರ ಅಕ್ಷಿತ್ ಶಶಿಕುಮಾರ್ ಇದೀಗ ಎರಡನೇ ಸಿನಿಮಾವನ್ನು ಮಾಡಿ ಮುಗಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಇದೀಗ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಫಿಲ್ಮ್ ಮೇಕಿಂಗ್ ಕೋರ್ಸ್ ತರಬೇತಿ ಪಡೆದು ಅಕ್ಷಿತ್ ಶಶಿಕುಮಾರ್ ನಟನೆಯ ಸಿನಿಮಾಗೆ ಆಕ್ಷನ್ ಕಟ್ ಹೇಳುವ ಮೂಲಕ ಚೊಚ್ಚಲ ಭಾರಿಗೆ ನಿರ್ದೇಶನದ ಕ್ಯಾಪ್ […]readmore
ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ ರಾವ್ ನಿರ್ದೇಶನದ “ನನ್ನ ಹುಡುಕಿ ಕೊಡಿ” ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನಡೆಯಿತು. ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಆರಂಭ ಫಲಕ ತೋರಿದರು. ನಿರ್ದೇಶಕ ಮಹೇಶ್ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ಕನಕಪುರದ ಧನ್ವಿತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ, ಬಂಡವಾಳವನ್ನು ಹೂಡುತ್ತಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಚಿತ್ರದ […]readmore
ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು ಜನಪದ ಕಲೆ ಡೊಳ್ಳು ಸುತ್ತ ಸಾಗುವ ಕಥೆಯಾಗಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಪವನ್ ಒಡೆಯರ್ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ರಿಲೀಸ್ […]readmore
ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಹಾಗೂ ಪತ್ನಿ ಧನಶ್ರೀ ವರ್ಮಾ ಅವರ ಮಧ್ಯೆ ಎಲ್ಲವೂ ಸರಿಯಿಲ್ವಾ? ಎಂಬ ಸುದ್ದಿ ಹರಿದಾಡಿತ್ತು. ಸದ್ಯದಲ್ಲೇ ಈ ಜೋಡಿ ಡಿವೋರ್ಸ್ ಪಡೆದುಕೊಳ್ಳುತ್ತಿದ್ದಾರೆ ಎಂಬ ವದಂತಿ ಸಾಕಷ್ಟು ಸೌಂಡ್ ಮಾಡಿತ್ತು. ಈ ವದಂತಿಗಳ ಮಧ್ಯೆಯೇ ಧನಶ್ರೀ ಇನ್ ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡು ಬ್ರೇಕ್ ಅಪ್ ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ವಿಡಿಯೋದಲ್ಲಿ ಧನಶ್ರೀ ಕೇಳಿ.. ನಾನು ನನ್ನ ತಾಯಿಯ ಮನೆಗೆ ಒಂದು ತಿಂಗಳು ಹೋಗುತ್ತಿದ್ದೇನೆ ಎಂದಿದ್ದಾರೆ. ಇದಕ್ಕೆ ಟಿವಿ […]readmore
ಬಾಲಿವುಡ್ ನಟ ರಣವೀರ್ ಸಿಂಗ್ ಪೇಪರ್ ಮ್ಯಾಗಜೀನ್ ಗಾಗಿ ಬೆತ್ತಲಾಗಿ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಮೇಲೆ ಎಫ್ ಐ ಆರ್ ಕೂಡ ದಾಖಲಾಗಿದೆ. ಈ ಬೆನ್ನಲ್ಲೆ ಮತ್ತೋರ್ವ ನಟಿ ಫ್ಲೋರಾ ಸೈನಿ ಕೂಡ ಬೋಲ್ಡ್ ಆಗಿ ಬೆತ್ತಲೆ ಫೋಟೋಶೂಟ್ ಮಾಡಿಸಿ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಾರೆ. ರಣವೀರ್ ಸಿಂಗ್ ಬೆತ್ತಲಾಗಿ ಫೋಸ್ ಕೊಟ್ಟ ಬಳಿಕ ಅದೊಂದು ಟ್ರೆಂಡ್ ರೀತಿಯಾಗಿದೆ. ಬಟ್ಟೆ ಬಿಚ್ಚಿ ಕ್ಯಾಮೆರಾಗೆ ಫೋಸ್ ಕೊಡುವವರ ಸಂಖ್ಯೆ ಹೆಚ್ಚುತ್ತಿದೆ. […]readmore
ಎರಡು ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಆದಿತ್ಯ ಪಂಚೋಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪ ಕೈ ಬಿಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ. 2019ರಲ್ಲಿ ಆದಿತ್ಯ ಪಂಚೋಲಿ ಮೇಲೆ ನಟಿ ಕಂಗನಾ ರನೌತ್ ಅತ್ಯಾಚಾರ ಆರೋಪ ಮಾಡಿದ್ದರು. ಅತ್ಯಾಚಾರ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪವನ್ನು ಪಂಚೋಲಿ ಮೇಲೆ ಹೊರಿಸಿದ್ದು ಈ ಕುರಿತು ಎಫ್ ಐ ಆರ್ ಕೂಡ ದಾಖಲಾಗಿತ್ತು. ಆದರೆ ಈವರೆಗೆ ಆದಿತ್ಯ ಪಂಚೋಲಿ ವಿರುದ್ಧ ಯಾವುದೇ ಚಾರ್ಜ್ಶೀಟ್ ಅನ್ನಾಗಲಿ, ಕ್ಲೋಸರ್ ರಿಪೋರ್ಟ್ ಅನ್ನಾಗಲಿ […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳು ಕಳೆದಿದ್ರು ಇಂದಿಗೂ ಅಭಿಮಾನಿಗಳು ಅಪ್ಪು ನೆನಪಿನಲ್ಲೇ ಇದ್ದಾರೆ. ಪುನೀತ್ ನಟನೆಯ ಯಾವುದೇ ಸಿನಿಮಾ ಟಿವಿಯಲ್ಲಿ ಬಂದ್ರು ಫ್ಯಾನ್ಸ್ ಮಿಸ್ ಮಾಡಿಕೊಳ್ಳುವುದಿಲ್ಲ. ಇದೀಗ ಅಪ್ಪು ನಿಧನಕ್ಕೂ ಮೊದಲು ನಟಿಸಿದ್ದ ಲಕ್ಕಿ ಮ್ಯಾನ್ ಸಿನಿಮಾ ಇದೇ ಸೆಪ್ಟೆಂಬರ್ 9ರಂದು ತೆರೆಗೆ ಬರ್ತಿದೆ. ಹೀಗಾಗಿ ಪುನೀತ್ ಅಭೀಮಾನಿಗಳು ಈ ದಿನಕ್ಕಾಗಿ ಎದುರು ನೋಡ್ತಿದ್ದಾರೆ. ನಿನ್ನೆ (ಆಗಸ್ಟ್ 23) ಬೆಂಗಳೂರಿನಲ್ಲಿ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್,ರಾಘವೇಂದ್ರ […]readmore
