ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಇನ್ನೆನ್ನೂ ಸಿನಿಮಾ ಬಿಡುಗಡೆ ಆಗೋಕೆ ಏಳೇ ಏಳು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ವಿಕ್ರಾಂತ್ ರೋಣನ ನಾಲ್ಕನೇ ಹಾಡನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಬಿಡುಗಡೆ ಆಗಿರೋ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಯಾವ ಮಟ್ಟಿಗೆ ಸದ್ದು ಮಾಡಿದೆ ಅನ್ನೋದು ಗೊತ್ತೆ ಇದೆ. ಅದ್ರಲ್ಲೂ ರಾ ರಾ ರಕ್ಕಮ್ಮ ಹಾಡು ಸಣ್ಣ ಮಕ್ಕಳಿಂದ ಹಿಡಿದು ಮದುಕರವರೆಗೂ ಎಲ್ಲರ ಬಾಯಲ್ಲೂ ಗುನುಗುವಂತೆ ಮಾಡಿದೆ. […]readmore
ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಜಿ .ರಾಜಶೇಖರ್(75) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಜಿ.ರಾಜಶೇಖರ್ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಬಿಗಡಾಯಿಸಿದ್ದ ಕಾರಣ ನಿನ್ನೆ(ಜು20) ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಜನಿಸಿದ ರಾಜಶೇಖರ್ ಕೆಲ ಕಾಲ ಶಿಕ್ಷಕರಾಗಿ ದುಡಿದು ಬಳಿಕ ಎಲ್ ಐ ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿತ್ಯ-ಸಮಾಜ, ಸಾಂಸ್ಕೃತಿಕ, ರಾಜಕಾರಣ ಹಾಗೂ ಸಮಕಾಲೀನ ವಿದ್ಯಮಾನಗಳ […]readmore
ಸ್ಯಾಂಡಲ್ ವುಡ್ ನಲ್ಲಿ ರ್ಯಾಪ್ ಸಿಂಗರ್ ಗಳು ದಿನದಿಂದ ದಿನಕ್ಕೆ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ವಿಭಿನ್ನ ಕಾನ್ಸೆಪ್ಟ್ ಮೂಲಕ ಕೇಳುಗರನ್ನು ಎದುರುಗೊಳ್ಳುವ ಇವರು ತಮ್ಮದೇ ಆದ ಶೈಲಿಯ ಮೂಲಕ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಅಂತವರ ಪಟ್ಟಿಯಲ್ಲಿ ಒಬ್ಬರು ವಿವೇಕ್ ರಾಚಪ್ಪ. ಸದ್ಯ ಇವರು ಬರೆದು ಹಾಡಿರುವ ‘ಲೈಫ್ ಈಸ್ ಸಿಂಪಲ್’ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೂಟ್ಯೂಬ್ ನಲ್ಲಿ 5 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಎಲ್ಲರ ಮನ ಗೆದ್ದಿರುವ ಈ ಹಾಡಿಗೆ ಸಾಕಷ್ಟು ಮೆಚ್ಚುಗೆಯೂ […]readmore
ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರದ ಧ್ವನಿಸಾಂದ್ರಿಕೆ, ಟ್ರೇಲರ್ ಮತ್ತು ಮೇಕಿಂಗ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಮೊದಲು ಮಾತನಾಡಿದ ಆರೋನ್ ಕಾರ್ತಿಕ್ವೆಂಕಟೇಶ್ ಚಿತ್ರಕ್ಕೆ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ […]readmore
ಕೆಜಿಎಫ್ 2 ಸಿನಿಮಾದ ಬಳಿಕ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಜೊತೆ ಹೆಚ್ಚು ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಕುಟುಂಬದ ಜೊತೆ ಅನಿಮಲ್ ಪಾರ್ಕ್ ಗೆ ತೆರಳಿದ್ದ ಯಶ್ ಇದೀಗ ಹೆಂಡತಿ ಜೊತೆ ಫಾರಿನ್ ಟ್ರಿಪ್ ಎಂಜಾಯ್ ಮಾಡ್ತಿದ್ದಾರೆ. ಯಶ್ ಜೊತೆ ಹಾಲಿಡೇ ಎಂಜಾಯ್ ಮಾಡುತ್ತಿರುವ ನಟಿ ರಾಧಿಕಾ ಪಂಡಿತ್ ಅವುಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಯುರೋಪ್ ನ ಸ್ಲೋವೆನಿಯಾದಲ್ಲಿ ಯಶ್ ದಂಪತಿಗಳು ಹಾಲಿಡೇ ಎಂಜಾಯ್ ಮಾಡುತ್ತಿದ್ದಾರೆ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್ ಎದುರು ರಾಧಿಕಾ […]readmore
ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಏನೇ ಮಾಡಿದ್ರು ಸುದ್ದಿಯಾಗ್ತಾರೆ. ಸದಾ ಸೋಷಿಯಲ್ ಮೀಡಿಯಾದಲ್ಲಿ ಬೇರೆಯವರ ಕಾಲೇಳೆದುಕೊಂಡು ವಿವಾದಗಳನ್ನ ಸೃಷ್ಟಿ ಮಾಡೋದ್ರಲ್ಲಿ ಎತ್ತಿದ ಕೈ. ಇದೀಗ ಇದೇ ವರ್ಮಾರಿಂದಾಗಿ ನಟಿಯೊಬ್ಬರು ತಮ್ಮ ಮನೆಯವರಿಂದ ದ್ವೇಷಿಸಿಕೊಳ್ಳುತ್ತಿದ್ದಾರಂತೆ. ಕಳೆದ ಕೆಲ ದಿನಗಳ ಹಿಂದೆ ನಟಿ ಇನಾಯಾ ಸುಲ್ತಾನ್ ಜೊತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಡ್ಯಾನ್ಸ್ ಮಾಡಿದ್ದರು. ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನಟಿ ಇನಾಯಾ ಸುಲ್ತಾನ್ ಗೆ ಸಾಕಷ್ಟು ಪ್ರಚಾರ ಸಿಕ್ಕಿತ್ತು. ಆದರೆ ಇದೇ ವಿಡಿಯೋದಿಂದ ಇನಾಯಾ […]readmore
ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಹೈ ಫೀವರ್ ನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ ಅಡ್ಮೀಟ್ ಮಾಡಲಾಗಿದೆ. ಪವನ್ ಕಲ್ಯಾಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನೇಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಪವನ್ ಜೊತೆಗೆ ಪಕ್ಷದ ಕೆಲವು ಪ್ರಮುಖ ನಾಯಕರು, ಕಾರ್ಯಕ್ರಮ ಸಮಿತಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಸಹ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿರುವ ಅಭಿಮಾನಿಗಳು ಪವನ್ […]readmore
ಖ್ಯಾತ ಗಾಯಕ ಸಿಧು ಮೂಸೆವಾಲ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಶಂಕಿತ ನಾಲ್ವರು ಆರೋಪಿಗಳು ಇಂದು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಪೊಲೀಸರು ಹಾಗೂ ಗ್ಯಾಂಗ್ ಸ್ಟಾರ್ ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಂಕಿತರು ಬಲಿಯಾಗಿದ್ದು ಜನರು ಮನೆಯಿಂದ ಹೊರ ಬರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಂಜಾಬ್ ನ ಅಮೃತಸರದ ಸಮೀಪದ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ಸುರಿಮಳೆ ಗೈದಿದ್ದಾರೆ. ಪಾಕ್ ಗಡಿಯಿಂದ ಸುಮಾರು 10 ಕಿಮೀ ದೂರದ ಹಳ್ಳಿಯಲ್ಲಿ […]readmore
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ನಟ ಯಲಹಂಕ ಬಾಲಾಜಿ ಇಂದು ನಿಧನರಾಗಿದ್ದಾರೆ. ಟಿ.ಎನ್.ಸೀತಾರಾಮ್ ನಿರ್ದೇಶನದ ಸಾಕಷ್ಟು ಧಾರವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು. ಬಾಲಾಜಿ ಅವರ ನಿಧನದ ಕುರಿತು ಟಿ.ಎನ್.ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಫೇಸ್ ಬುಕ್ ನಲ್ಲಿ […]readmore
ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ […]readmore
