ಸಾಕಷ್ಟು ವರ್ಷಗಳ ಬಳಿಕ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಒಂದರ ಮೇಲೊಂದರಂತೆ ಸರ್ಪೈಸ್ ನೀಡ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿ ಅಭಿಮಾನಿಗಳಿಗೆ ದಿಲ್ ಖುಷ್ ಆಗುವಂತೆ ಮಾಡಿದ್ದ ರಮ್ಯಾ ಬಳಿಕ ಆ ಚಿತ್ರದಿಂದ ದೂರ ಸರಿದಿದ್ದರು. ಇದೀಗ ಉತ್ತರಕಾಂಡ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮಧ್ಯೆ ರಮ್ಯಾರ ಫೋಟೋವೊಂದು ಕುತೂಹಲಕ್ಕೆ ಕಾರಣವಾಗಿದೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮಿಳು ನಟ ಧನುಷ್ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ […]readmore
1987ರಲ್ಲಿ ತೆರೆಕಂಡ ನಾಯಗನ್ ಸಿನಿಮಾದ ಬಳಿಕ ಕಮಲ್ ಹಾಸನ್ ಹಾಗೂ ಮತ್ತು ಮಣಿರತ್ನಂ ಮತ್ತೆ ಒಂದಾಗಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಜೋಡಿಯನ್ನು ಮತ್ತೆ ಒಟ್ಟಿಗೆ ನೋಡಬೇಕು ಎಂಬ ಕನಸು ನನಸಾಗಿದೆ. ಕಮಲ್ ಹಾಗೂ ಮಣಿರತ್ನಂ ಕಾಂಬಿನೇಷನ್ ನ ನಾಯಗನ್ ಚಿತ್ರ ಬಾಕ್ಸ್ ಆಫೀಸ್ ದೂಳೆಬ್ಬಿಸಿತ್ತು. ಅಲ್ಲದೆ ಈ ಚಿತ್ರದ ನಟನೆಯ ಕಮಲ್ ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಈ ಜೋಡಿಗಳು ಮತ್ತೆ ಒಂದಾಗ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟದಲ್ಲಿ […]readmore
ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹುಭಾಷ ನಟಿಯಾಗಿ ಸದ್ದು ಮಾಡುತ್ತಿದ್ದಾರೆ. ಒಂದರ ಹಿಂದೊದರಂತೆ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ರಶ್ಮಿಕಾಗೆ ಟ್ರೋಲಿಗರ ಕಾಟ ಮಾತ್ರ ಕೊಂಚವು ಕಮ್ಮಿಯಾಗಿಲ್ಲ. ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ರಶ್ಮಿಕಾ ಮಂದಣ್ಣ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ‘ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ […]readmore
ಗಾಳಿಪಟ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಭಾವನಾ ರಾವ್ ಇದೀಗ ಬಿಟೌನ್ ಗೆ ಎಂಟ್ರಿಕೊಟ್ಟಿದ್ದಾರೆ. ಪವರ್ ಫುಲ್ ಪಾತ್ರದ ಮೂಲಕ ಭಾವನ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಧಾರಾವಿ ಬ್ಯಾಂಕ್ ಹೆಸರಿನ ಕ್ರೈಂ ಕಥೆ ಹೊಂದಿರುವ ಚಿತ್ರದಲ್ಲಿ ಭಾವನ ರಾವ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ವಿವೇಕ್ ಓಬೆರಾಯ್ ಹಾಗೂ ಸುನಿಲ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಈ ಚಿತ್ರದ ಮೂಲಕ ಭಾವನ ಬಾಲಿವುಡ್ ಚಿತ್ರರಂಗದಲ್ಲು ಸದ್ದು ಮಾಡಲು ಮುಂದಾಗಿದ್ದಾರೆ. ಧಾರಾವಿ ಮುಂಬೈನ […]readmore
ಸಾಕಷ್ಟು ನಿರೀಕ್ಷೆಯೊಂದಿಗೆ ತೆರೆಗೆ ಬಂದಿದ್ದ ವಿಜಯ್ ದೇವರಕೊಂಡ ನಟನೆಯ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಆ ಬಳಿಕ ವಿಜಯ್ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ನ ಜನ ಗಣ ಮನ ಸಿನಿಮಾ ಕೂಡ ಆರಂಭಕ್ಕೆ ಮೊದಲೇ ಅಂತ್ಯಕಂಡಿತ್ತು. ಲೈಗರ್ ಸೋಲಿನ ಬಳಿಕ ಇದೇ ಮೊದಲ ಭಾರಿಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ನೀಡಿದ್ದಾರೆ. ಲೈಗರ್ ಸಿನಿಮಾದ ಸೋಲಿನ ಬಳಿಕ ಸಾಕಷ್ಟು ವಿಜಯ್ ದೇವರಕೊಂಡ ಅವರಿಗೆ ಕಂಬ್ಯಾಕ್ ಮಾಡಿ ಎನ್ನುತ್ತಿದ್ದಾರೆ. ಯಾವುದೇ ಗಾಡ್ ಫಾದರ್ […]readmore
“ನನ್ನವನು”, ” ಕೋಟೆ”, “ದಂಡುಪಾಳ್ಯ” , “ಶಿವ” ಮುಂತಾದ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಹುಬ್ಬಳ್ಳಿ ಡಾಬಾ” ಚಿತ್ರ ಇದೇ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಕೊರೋನ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ […]readmore
ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ” ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ನೀಡಿದ್ದು ಈ ಚಿತ್ರದ “ಹಾಗೆ ಆದ ಆಲಿಂಗನ” ಎಂಬ ಹಾಡು ಬಿಡುಗಡೆಯಾಗಿದೆ. ಧನಂಜಯ್ ರಂಜನ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಗೂ ಕೀರ್ತನಾ ವೈದ್ಯನಾಥನ್ ಇಂಪಾಗಿ ಹಾಡಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡು ಬಿಡುಗಡೆ ಆಗಿದೆ. ಮಲೆಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್, “ಗೀತಾ ಗೋವಿಂದಂ” ಸೇರಿದಂತೆ ಮುನ್ನೂರಕ್ಕೂ ಅಧಿಕ ಚಿತ್ರಗಳಿಗೆ […]readmore
ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ […]readmore
ಉದಯ ಟಿ.ವಿಯಲ್ಲಿ ಪ್ರಸಾರವಾಗುತ್ತಿರುವ ʻನೇತ್ರಾವತಿʼ ಧಾರಾವಾಹಿ ತಂಡದ ಸದಸ್ಯರು ಇತ್ತೀಚೆಗೆ ಕಂಠೀರವ ಸ್ಟೂಡಿಯೋಗೆ ಭೇಟಿ ನೀಡಿ ಕರ್ನಾಟಕ ರತ್ನ ಪುನೀತ್ರಾಜ್ಕುಮಾರ್ ಪುಣ್ಯಭೂಮಿಗೆ ಪೂಜೆ ಸಲ್ಲಿಸಿದರು. ಧಾರಾವಾಹಿಯ ಕಲಾವಿದರಾದ ಅಂಜಲಿ, ದುರ್ಗಾಶ್ರೀ, ಮಹೇಶ್, ಹೇಮಾ ನಾಡಿಗ್, ದೀಪಿಕಾ, ಸಚಿನ್, ಪಲ್ಲವಿ, ಮೋನಿಕಾ, ಮಾಲತಿ ಮೈಸೂರು, ಯತೀಶ್, ನಿರ್ದೇಶಕ ಸಂತೋಷ್ ಗೌಡ, ಛಾಯಾಗ್ರಾಹಕ ದಯಾಕರ್, ಸಂಕಲನಕಾರ ಗುರುಮೂರ್ತಿ ಹೆಗಡೆ ಮುಂತಾದವರು ಸಮಾಧಿಗೆ ಹೂ ಹಣ್ಣು, ಹಾರ ಅರ್ಪಿಸಿ ಪುನೀತ್ ಪುಣ್ಯಸ್ಮರಣೆ ಮಾಡಿಕೊಂಡರು. ಎಲ್ಲರೂ ಪುನೀತ್ ಚಿತ್ರವಿರುವ ಷರ್ಟ್ ಧರಿಸಿ ಅಭಿಮಾನ […]readmore
ತುಳುನಾಡಿನ ಪ್ರತಿಭೆ ನಟ ರೂಪೇಶ್ ಶೆಟ್ಟಿ ಸದ್ಯ ಬಿಗ್ ಬಾಸ್ ನಲ್ಲಿ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ರೂಪೇಶ್ ಶೆಟ್ಟಿ ಇದೀಗ ಟಿವಿ ಸೀಸನ್ ನಲ್ಲೂ ಕಮಾಲ್ ಮಾಡ್ತಿದ್ದಾರೆ. ಆದರೆ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು ಅವರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದ ಕಾಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರೂಪೇಶ್ ಶೆಟ್ಟಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸೀಸನ್ 9ರಲ್ಲಿ ಇತ್ತೀಚೆಗಷ್ಟೇ ಪ್ರಶಾಂತ್ ಸಂಬರ್ಗಿ ಕನ್ನಡ ಪರ […]readmore
