ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ. ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು […]readmore
ಉದ್ಯಮ ವಲಯದಲ್ಲಿ ಭಾರೀ ಹೆಸರು ಮಾಡಿರುವ ನನ್ಬನ್ ಗ್ರೂಪ್ ಮನರಂಜನಾ ಲೋಕಕ್ಕೆ ಹೊಸ ಹೆಜ್ಜೆ ಇಟ್ಟಿದೆ. ನನ್ಬನ್ ಗ್ರೂಪ್ ವತಿಯಿಂದ ನನ್ಬನ್ ಎಂಟರ್ಟೈನ್ಮೆಂಟ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭವಾಗಿದೆ. ಆಗಸ್ಟ್ 3ರಂದು ಚೆನ್ನೈನಲ್ಲಿ ಅದ್ಧೂರಿಯಾಗಿ ನನ್ಬನ್ ಎಂಟರ್ಟೈನ್ಮೆಂಟ್ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನನ್ಬನ್ ಗ್ರೂಪ್ ಮುಖ್ಯಸ್ಥ ನರೈನ್ ರಾಮಸ್ವಾಮಿ, ನನ್ಬನ್ ಗ್ರೂಪ್ ಸಹ ಸಂಸ್ಥಾಪಕ ಮಣಿವಣ್ಣನ್, ನನ್ಬನ್ ಗ್ರೂಪ್ ಸಂಸ್ಥಾಪಕ ಗೋಪಾಲ ಕೃಷ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನನ್ಬನ್ ಗ್ರೂಪ್ ಭಾರತದ ರಾಯಭಾರಿ ನಟ ಆರಿ ಅರ್ಜುನನ್ […]readmore
ಈಗಂತೂ ಪ್ಯಾನ್ ಇಂಡಿಯಾ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಎಲ್ಲಾ ವುಡ್ ಗಳಲ್ಲಿಯೂ ಸಾಲು ಸಾಲು ಪ್ಯಾನ್ ಇಂಡಿಯಾ ಚಿತ್ರಗಳು ಅನೌನ್ಸ್ ಆಗುತ್ತಲೇ ಇದೆ. ಅದರ ಮುಂದುವರೆದ ಭಾಗವಾಗಿ ತೆಲುಗಿನಲ್ಲಿ ಸ್ಪಾರ್ಕ್ ಲೈಫ್ ಎಂಬ ಸಿನಿಮಾ ತಯಾರಾಗ್ತಿದ್ದು, ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. 2 ನಿಮಿಷ 2 ಸೆಕೆಂಡ್ ಒರುವ ಟೀಸರ್ ಕಂಪ್ಲೀಟ್ ಆಕ್ಷನ್ಸ್ ಗಳಿಂದ ಕೂಡಿದೆ. ಯುವ ಪ್ರತಿಭೆ ವಿಕ್ರಾಂತ್ ನಾಯಕನಾಗಿ ನಟಿಸಿದ್ದು, ಮೆಹ್ರೀನ್ ಫಿರ್ಜಾದಾ ಹಾಗೂ ರುಕ್ಸಾರ್ ಧಿಲ್ಲೋನ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಧಗಧಗಿಸುವ ಬೆಂಕಿ, […]readmore
ಉಸ್ತಾದ್ ರಾಮ್ ಪೋತಿನೇನಿ ಹಾಗೂ ಬೋಯಾಪಾಟಿ ಶ್ರೀನು ಕಾಂಬಿನೇಷನ್ ಮಾಸ್ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ನಿನ್ ಸುತ್ತ ಸುತ್ತ ತಿರುಗಿದೆ ಎಂಬ ಗಾನಬಜಾನಕ್ಕೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ ಹಾಗೂ ಶ್ರೀನಿಧಿ ತಿರುಮಲ ಕಂಠ ಕುಣಿಸಿದ್ದಾರೆ. ಎಸ್ ಎಸ್ ತಮನ್ ಟ್ಯೂನ್, ರಾಮ್ ಎನರ್ಜಿ, ಶ್ರೀಲೀಲಾ ಗ್ಲಾಮರ್ ರಂಗು, ಅದ್ಧೂರಿ ಸೆಟ್ ಹಾಡಿನ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಐದು ಭಾಷೆಯಲ್ಲಿಯೂ ಸ್ಕಂದ ಹಾಡು ಬಿಡುಗಡೆಯಾಗಿದೆ. ಲವರ್ ಬಾಯ್ […]readmore
ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ […]readmore
ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ […]readmore
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ “ಬುದ್ದಿವಂತ 2” ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. “ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 […]readmore
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಕುರುತು ನಾಯಕ ಶ್ರೇಯಸ್ ಚಿಂಗಾ ಅವರು, ಧನರಾಜ ಬಾಬು ಅವರ ಬಳಿ ಹೇಳಿದಾಗ, ಹೊಸತಂಡದ ಹೊಸಪ್ರಯತ್ನಕ್ಕೆ ಧನರಾಜ ಬಾಬು ಅವರು ಪ್ರೋತ್ಸಾಹ ನೀಡಲು ಮುಂದಾದರು.. ಈ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಸಾಕಷ್ಟು ಮಾತನಾಡಿದರು. “ಡೇವಿಡ್” […]readmore
ಉಸಿರೇ.. ಉಸಿರೇ… ಸದ್ಯ ಈಗಾಗಲೇ ಹಲವಾರು ವಿಶೇಷತೆಗಳಿಂದ ಸದ್ದು ಮಾಡುತ್ತಾ ಪ್ರೇಕ್ಷಕರ ಕುತೂಹಲ ಮುಡಿಸುತ್ತಿರುವ ಚಿತ್ರ..ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ” ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗುತ್ತಲೇ ಚಿತ್ರಕ್ಕೆ ಹೈ ವೋಲ್ಟೇಜ್ ಸಿಕ್ಕಿತ್ತು.. ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರವು ಚಿತ್ರದ ಟೀಸರ್ ಒಂದನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚು ಮಾಡಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಳ್ಳಾರಿ ಶ್ರೀ ರೇಣುಕಾ ಎಲ್ಲಮ್ಮ ಜಾತ್ರೆಯಲ್ಲಿ […]readmore
“ಟಗರು” ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಮಾನ್ವಿತ ಕಾಮತ್, ಪ್ರಸ್ತುತ ಪಿ.ಸಿ ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ “BAD” ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ. ಪ್ರಮುಖ ಪಾತ್ರಧಾರಿ ನಕುಲ್ ಗೌಡ ಅವರ ಲುಕ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ(ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ […]readmore
