ಬಾಲಿವುಡ್ ನಟಿ ರಾಖಿ ಸಾವಂತ್ ಕಳೆದ ಐದಾರು ತಿಂಗಳುಗಳಿಂದ ಮೈಸೂರು ಮೂಲದ ಉದ್ಯಮಿ ಆದಿಲ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದಾರೆ. ಮುಂಬೈನಲ್ಲಿ ಇಬ್ಬರು ಕೈ ಕೈ ಹಿಡಿದು ಸುತ್ತಾಡುತ್ತಿದ್ದು ಸಾಕಷ್ಟು ಭಾರಿ ಒಟ್ಟಿಗೆ ಪಾಪರಾಜಿಗಳಿಗೆ ಫೋಸ್ ನೀಡಿದ್ದಾರೆ. ಇದೀಗ ಬಿಗ್ ಬಾಸ್ ಮನೆಯಲ್ಲಿ ಆದಿಲ್ ಜೊತೆ ಮದುವೆಯಾಗೋ ಇಂಗಿತವನ್ನು ರಾಖಿ ಸಾವಂತ್ ವ್ಯಕ್ತಪಡಿಸಿದ್ದಾರೆ. ವೆಬ್ ಸೈಟ್ ಒಂದಕ್ಕೆ ಮಾತನಾಡಿದ ರಾಖಿ ಸಾವಂತ್ ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಬಗ್ಗೆ ಮಾತನಾಡಿದ್ದಾರೆ. ಆದಿಲ್ ಜೊತೆ ಬಿಗ್ ಬಾಸ್ 16 ಸೀಸನ್ […]readmore
ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ 10ನೇ ಘಟಿಕೋತ್ಸವ ಕಾರ್ಯಕ್ರಮ ನಿನ್ನೆ (ಸೆ.14) ರಂದು ನಡೆದಿದ್ದು ಈ ವೇಳೆ ಖ್ಯಾತ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ನಗರಾಭಿವೃದ್ಧಿ ತಜ್ಞ ಹಾಗೂ ಸಮಾಜ ಸೇವಕರಾದ ವ್ಹಿ. ರವಿಚಂದರ್ ವೆಂಕಟರಾಮನ್ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’, ಸಿನಿಮಾ ರಂಗದ ಸೇವೆ ಪರಿಗಣಿಸಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ ಗೆ ‘ಡಾಕ್ಟರ್ ಆಫ್ ಲೆಟರ್ಸ್’ ಮತ್ತು […]readmore
ಕನ್ನಡ ಕಿರುತೆರೆಯ ಖ್ಯಾತ ಕಲಾವಿದ, ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಖ್ಯಾತಿಯ ನಟ ಮಂಡ್ಯ ರವಿ ನಿನ್ನೆ ಸಂಜೆ 6.30ರ ಸುಮಾರಿಗೆ ನಿಧನರಾಗಿದ್ದಾರೆ. ಚಂದು ನಿಧನದ ಕುರಿತು ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಕಿಡ್ನಿ ಸಮಸ್ಯೆ ಹಾಗೂ ಜಾಂಡೀಸ್ ನಿಂದ ಬಳಲುತ್ತಿದ್ದ ಮಂಡ್ಯ ರವಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು ರವಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]readmore
ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಚಿತಾ ರಾಮ್ ಸಿನಿಮಾ ರಂಗದಲ್ಲಿ ಸಖತ್ ಬೇಡಿಕೆ ಕಾಯ್ದುಕೊಂಡಿದ್ದಾರೆ.ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಚಿತ್ರದ ಪ್ರೀ ರಿಲೀಸ್ ಈವೆಂಟ್ ಆಯೋಜಿಸಿದ್ದು ನಟ ದುನಿಯಾ ವಿಜಯ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ರಚ್ಚು ಬಗ್ಗೆ ವಿಜಿ ಮೆಚ್ಚುಗೆ ಮಾತನಾಡಿದ್ದಾರೆ. ರಚಿತಾ ರಾಮ್ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ […]readmore
ಕಳೆದ ಕೆಲ ವರ್ಷಗಳ ಹಿಂದೆ ಸಿನಿಮಾಗಳ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇದೀಗ ವಿವಾದಗಳ ಮೂಲಕವೇ ಸದ್ದು ಮಾಡ್ತಿದ್ದಾರೆ. ಒಂದಲ್ಲ ಒಂದು ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗೋ ವರ್ಮಾ ಇದೀಗ ತೆಲುಗು ಚಿತ್ರರಂಗವನ್ನು ನಿಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟ ಖ್ಯಾತ ನಟ, ನಿರ್ಮಾಪಕ ಕೃಷ್ಣ ರಾಜು ನಿಧನದ ಹಿನ್ನೆಲೆಯಲ್ಲಿ ವರ್ಮಾ ಸರಣಿ ಟ್ವೀಟ್ ಮಾಡಿದ್ದಾರೆ. ಈ ವೇಳೆ ತೆಲುಗು ಚಿತರಂಗವನ್ನು ನಿಂಧಿಸಿದ್ದಾರೆ. ಕೃಷ್ಣಂರಾಜು ಅಂತಹ ದೊಡ್ಡ ಕಲಾವಿದ ನಿಧನರಾದಾಗಲೂ […]readmore
ನಟ ಡಾಲಿ ಧನಂಜಯ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ನಟ ಧನಂಜಯ್ ವಿಭಿನ್ನ ಪಾತ್ರಗಳ ಮೂಲಕವೇ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ.ಈ ಮಧ್ಯೆ ಡಾಲಿ ಯಾವಾಗ ಮದುವೆಯಾಗುತ್ತಾರೆ ಎಂಬ ಪ್ರಶ್ನೆ ಹರಿದಾಡುತ್ತಿದ್ದು ಇದಕ್ಕೆ ಧನಂಜಯ್ ಉತ್ತರ ನೀಡಿದ್ದಾರೆ, ಸದ್ಯ ಧನಂಜಯ್ ನೀಡಿರುವ ಉತ್ತರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧನಂಜಯ್ ನಟನೆಯ ಬಡವ ರಾಸ್ಕಲ್ ಸಿನಿಮಾ ಸೂಪರ್ ಹಿಟ್ ಆಗಿದ್ದು ಈ ಸಿನಿಮಾ ತೆಲುಗಿಗೆ ಡಬ್ ಆಗಿ ಬಿಡುಗಡೆ ಆಗಿದೆ. […]readmore
ಬಾಲಿವುಡ್ ನಟಿ ಜಿಯಾ ಖಾನ್ ನಿಧನರಾಗಿ 9 ವರ್ಷ ಕಳೆದಿದೆ. ಆದರೆ ಇಂದಿಗೂ ಆಕೆಯ ಸಾವು ನಿಗೂಡವಾಗಿಯೇ ಉಳಿದಿದೆ. 2013ರ ಜೂನ್ 3ರಂದು ಜಿಯಾ ಶವ ಮುಂಬೈನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗಳ ಸಾವಿನ ಪ್ರಕರಣವನ್ನು ಮರು ತನಿಖೆ ಮಾಡುವಂತೆ ರಬಿಯಾ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾ ಗೊಳಿಸಿದೆ. ಮಗಳ ಮೃತಪಟ್ಟ ದಿನದಿಂದಲೂ ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಜಿಯಾ ಖಾನ್ ತಾಯಿ ರಬಿಯಾ ಖಾನ್ […]readmore
ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಮೋಹನ್ ಲಾಲ್ ನಟನೆಯ 4-5 ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದ್ದು ಆರೇಳು ಸಿನಿಮಾಗಳು ಪ್ರೀ ಪ್ರೊಡಕ್ಷನ್ ಕೆಲಸದಲ್ಲಿವೆ. ಈ ಮಧ್ಯೆ ಮೋಹನ್ ಲಾಲ್ ರಾಜಕೀಯಕ್ಕೆ ಎಂಟ್ರಿಕೊಡ್ತಾರೆ ಎಂಬ ಸುದ್ದಿ ಜೋರಾಗಿಯೇ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ಮೋಹನ್ ಲಾಲ್ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿಕೊಡುವುದು ಹೊಸದೇನು ಅಲ್ಲ. ಪ್ರತಿಯೊಂದು ಭಾಷೆಯ ಸಾಕಷ್ಟು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. […]readmore
ಕಳೆದ ಕೆಲ ತಿಂಗಳುಗಳಿಂದ ಸೈಲೆಂಟ್ ಆಗಿದ್ದ ನಟ ನರೇಶ್ ಹಾಗೂ ರಮ್ಯಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಇಂದು ಏಕಾಏಕಿ ರಮ್ಯಾ, ನರೇಶ್ ಮನೆಗೆ ತೆರಳಿದ್ದು ಆತನೊಂದಿಗೆ ಜೀವನ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೆ ಹೇಗಾದರೂ ಮಾಡಿ ಪತಿಯನ್ನು ಪವಿತ್ರಾ ಲೋಕೇಶ್ ರಿಂದ ದೂರ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಈ ಕುರಿತಾಗಿ ನರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮನೆಯಲ್ಲಿ ರಮ್ಯಾ ಇದ್ದಾರೆ, ನನ್ನೊಂದಿಗೆ ಸಂಸಾರ ಮಾಡಲು ಬಂದಿದ್ದಾರೆ ಎನ್ನುವುದೆಲ್ಲಾ ಸುಳ್ಳು ಸುದ್ದಿ. ಅದು ಎಂದಿಗೂ ಸಾಧ್ಯವಾಗದೇ ಇರುವ ಕೆಲಸ. […]readmore
ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿರೋ ನಟ ಅನಿರುದ್ಧ್ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಸೀಸನ್ ಶುರುವಾಗಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ನಟ ಅನಿರುದ್ಧ್ ಬಿಗ್ ಬಾಸ್ ಗೆ ಹೋಗ್ತಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಅನಿರುದ್ಧ್ ಅವರಿಗೆ ಆಫರ್ ಮಾಡಲಾಗಿದೆ. […]readmore
