ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ “ಶೀಲ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. “ಶೀಲ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು […]readmore
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ. ಭಾರತೀಯ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಲೋಗೋ ಅನಾವರಣ ಮಾಡಿ ಆಟಗಾರರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ವಾಣಿಜ್ಯಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್, ಹಿರಿಯ ಸಿನಿಮಾ ಪತ್ರಕರ್ತರಾದ ಸದಾಶಿವ ಶೆಣೈ ಉಪಸ್ಥಿತರಿದ್ದರು. ಬಳಿಕ ಪ್ರಕಾಶ್ ಪಡುಕೋಣೆ, ಪುನೀತ್ […]readmore
ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ “ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. “ಲೂಸಿಯಾ”, “ಯೂಟರ್ನ್” ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕನ್ನಡ ಹಾಗೂ ಮಲೆಯಾಳಂನಲ್ಲಿ ಇದೇ ಜೂನ್ 23 ರಂದು “ಧೂಮಂ” ಚಿತ್ರ ಬಿಡುಗಡೆಯಾಗಲಿದೆ. “ಧೂಮಂ” ಚಿತ್ರದ ಕನ್ನಡ ಅವತರಣಿಕೆಯನ್ನು ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. […]readmore
ಮುರುಗೇಶ್ ಕಣ್ಣಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಅಗ್ರಸೇನಾ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣಲಿದೆ. ಶ್ರೀಮತಿ ಮಮತಾ ಜಯರಾಮರೆಡ್ಡಿ ಹಾಗೂ ಜಯರಾಮರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಳ್ಳಿ ಹಾಗೂ ನಗರದಲ್ಲಿ ಡಬಲ್ ಟ್ರ್ಯಾಕ್ ನಲ್ಲಿ ಸಾಗುವ ಕಥಾಹಂದರ ಈ ಚಿತ್ರದಲ್ಲಿದ್ದು, ತಂದೆ-ಮಗನ ಸಂಬಂಧದ ಕಥೆ ಒಂದು ಕಡೆಯಾದರೆ, ನಾಯಕ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಹೇಗೆ ಹೋರಾಡುತ್ತಾನೆ ಎನ್ನುವುದು ಮತ್ತೊಂದು ಟ್ರಾಕ್ನಲ್ಲಿ ಸಾಗುತ್ತದೆ. ಆಕ್ಷನ್ ಫ್ಯಾಮಿಲಿ, ಲವ್, ಸೆಂಟಿಮೆಂಟ್ ಎಲ್ಲಾ ರೀತಿಯ ಅಂಶಗಳನ್ನು ಒಳಗೊಂಡ […]readmore
ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಹದಿನೇಳು ದಿನಗಳ ಚಿತ್ರೀಕರಣ ನಡೆದಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿ ಮಾಲೀಕರಾದ ಚನ್ನಕೇಶವ […]readmore
ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ಲೆಟ್ಸ್ ಗೆಟ್ ಮ್ಯಾರೀಡ್. ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ. ಫ್ಯಾಮಿಲಿ ಎಂಟರ್ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು […]readmore
ವಾಲಟ್ಟಿ ಚಿತ್ರವು ಅದ್ಭುತವಾಗಿ ಸಾಗುವ ಸಾಕು ನಾಯಿಗಳ ಗ್ಯಾಂಗ್ ಬಗ್ಗೆ ಹೃದಯ ಬೆಚ್ಚಗಾಗುವ ಕಥೆಯಾಗಿದ್ದು, ಅಮೋಘ ಸಾಹಸಮಯ ದೃಶ್ಯಗಳನ್ನು ಹೊಂದಿದೆ. ಈ ಚಿತ್ರದ ರೋಚಕ ವಿಷಯವೆಂದರೆ ಅದು ಮಲಯಾಳಂನ ಜನಪ್ರಿಯ ನಟರಾದ ರೋಷನ್ ಮ್ಯಾಥ್ಯೂ, ಸೌಬಿನ್ ಶಾಹಿರ್, ಇಂದ್ರನ್ಸ್, ಸನ್ನಿ ವೇಯ್ನ್, ಸೈಜು ಕುರುಪ್ ಮತ್ತು ಇತರರು ನಾಯಿ ಪಾತ್ರಗಳಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಇಡೀ ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲ ಬಾರಿಗೆ ಕ್ಯಾನೈನ್ ಮತ್ತು ಇತರ ಸಾಕುಪ್ರಾಣಿಗಳನ್ನು ಆಧಾರವಾಗಿಟ್ಟುಕೊಂಡು ಮಾಡಿರೋ ಸಿನೆಮಾ. ನೋಡುಗರ ಮನಸೆಳೆಯುವ ತಾಜಾ […]readmore
ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ “ಆಟ ಸಾಮಾನು”. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. ” ಆಟ ಸಾಮಾನು” ನನ್ನ ಮೂರನೇ ಚಿತ್ರ. ಈ ಚಿತ್ರವನ್ನು “ಬಂಧು ಮಿತ್ರರ” ಜೊತೆ ಸೇರಿ ನಿರ್ಮಿಸುತ್ತಿದ್ದೇನೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದೇನೆ. “ಆಟ […]readmore
ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A” ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B” ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ. ‘ಕವಲು ದಾರಿ’ ನಂತರ […]readmore
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಶಿವರಾಜ್ ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು. ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್ ನವಿರಾಗಿ ಶುರುವಾದ […]readmore
