ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣ ಕೆರಿಯರ್ ನ ವಿಶೇಷ ಸಿನಿಮಾಗಳಲ್ಲೊಂದಾಗಿದೆ ಈ ಚಿತ್ರ. ಹ್ಯಾಟ್ರಿಕ್ ಹೀರೋ ಸಿನಿ ಕೆರಿಯರ್ ನ 125ನೇ ಸಿನಿಮಾ ಒಂದು ಕಡೆಯಾದ್ರೆ ಗೀತಾ ಶಿವಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು. ದೊಡ್ಮನೆ ಅಭಿಮಾನಿಗಳಲ್ಲಿ, […]readmore
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, […]readmore
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ […]readmore
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು. ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು […]readmore
Triple A ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯನಟರಾದ ಎಂ.ಎಸ್.ಉಮೇಶ್, ಬೆಂಗಳೂರು ನಾಗೇಶ್, ಹೊನ್ನವಳ್ಳಿ ಕೃಷ್ಣ, ಶೈಲಶ್ರೀ ಹಾಗೂ ಜಯಲಕ್ಷ್ಮಿ ಪಾಟೀಲ್ ಅವರನ್ನು ನಿರ್ಮಾಪಕ ಗುಲ್ಜರ್ ಜಾಕೀರ್ ಸನ್ಮಾನ ಮಾಡಿದರು. ಸನ್ಮಾನಿತರ ಪರವಾಗಿ ಮಾತನಾಡಿದ ಹಿರಿಯ ನಟ ಉಮೇಶ್, ಚಿತ್ರ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ ನಮ್ನನ್ನು ನೆನಪಿಸಿಕೊಂಡು ಸನ್ಮಾನಿಸಿದ ನಿರ್ಮಾಪಕರಿಗೆ […]readmore
ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರಾರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ವಿಷ್ಯುವಲ್ಸ್ ನೋಡಿದರೆ, ಹಾಲಿವುಡ್ ಚಿತ್ರಗಳು ನೆನಪಾಗುತ್ತದೆ. ಟೀಸರ್ ನಲ್ಲೇ ಉತ್ತರ ಕಾಂಡವನ್ನು ಅನುಪ್ ಕಟ್ಟುಕರನ್ ಅದ್ಭುತವಾಗಿ ತೋರಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ ಟೀಸರ್ ಎಲ್ಲರ […]readmore
ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ. ಮೆಗಾ ಪವರ್ ಸ್ಟಾರ್ […]readmore
ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಪುನರ್ಜನ್ಮ ಪ್ರೇಮಕಥೆ ಒಳಗೊಂಡ ‘ರುಧೀರ ಕಣಿವೆ’ ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳು ಚೆನ್ನಾಗಿದೆ. ಛಾಯಾಗ್ರಹಣ, ಮ್ಯೂಸಿಕ್ ಕೂಡ ಅದ್ಭುತವಾಗಿದೆ. ಒಳ್ಳೆ ತಂಡ ಇದಾಗಿದ್ದು, ಒಳ್ಳೆ ಸಿನಿಮಾ ಮಾಡಿರುವ ಭರವಸೆಯಿದೆ ಎಂದು ಭಾ.ಮ.ಹರೀಶ್ ಹಾರೈಸಿದರು. ನಟ ಧರ್ಮ ಕಿರ್ತಿರಾಜ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಚಿತ್ರದ ತುಣುಕುಗಳನ್ನು ನೋಡಿದರೆ ಇದು ವಿಶೇಷವಾದ […]readmore
ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ , ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ “ಕರಿ ಹೈದ….ಕರಿ ಅಜ್ಜ …”.ಸಿನೆಮಾದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಬೆಳ್ತಂಗಡಿ ತಾಲೂಕಿನ ಬಳ್ಳಮಂಜದ ಇತಿಹಾಸ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಸ್ಥಳಿಯ ಶಾಸಕ ಶ್ರೀ ಹರೀಶ್ ಪೂಂಜ ರವರು ಕ್ಯಾಮರ ಚಾಲನೆ ಮಾಡುವುದರ ಮೂಲಕ ಅದ್ದೂರಿ ಚಾಲನೆ ನೀಡಿದರು. ಮಾತ್ರಶ್ರೀ ಕಮಲ ಕೆ ಸಪಲ್ಯ ಆರಂಭ ಫಲಕ ತೋರಿಸಿದರು. ಇತ್ತೀಚಿನ ಹಲವಾರು […]readmore
ಎಂ. ಎಂ. ಸಿನಿಮಾಸ್ ಬ್ಯಾನರ್ ನಡಿ ಭಾಸ್ಕರ್ ಆರ್ ನೀನಾಸಂ ನಿರ್ದೇಶಿಸಿರುವ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಂಟ್ರಸ್ಟಿಂಗ್ ಟ್ರೇಲರ್, ಚೆಂದದ ಹಾಡುಗಳ ಮೂಲಕ ಚಿತ್ರ ಪ್ರೇಮಿಗಳ ಮನಗೆದ್ದಿರುವ ಚಿತ್ರ ನವೆಂಬರ್ 25ಕ್ಕೆ ಪ್ರೇಕ್ಷಕರೆದುರು ಬರಲು ರೆಡಿಯಾಗಿದೆ. ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್ ನೀನಾಸಂ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಅಶ್ವಿನಿ ಕೆ ಎನ್ ಕಥೆ ಬರೆದಿದ್ದು, ಭಾಸ್ಕರ್ ಆರ್ ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳಿಂದ ಸ್ಪೂರ್ತಿ […]readmore
