• March 14, 2026

ಸ್ಯಾಂಡಲ್ ವುಡ್ ನಲ್ಲಿ ‘ಕ್ರಾಂತಿ’ ಹರಿಸಲು ಮುಂದಾದ ದರ್ಶನ್: ಅಕ್ಷರ ಕ್ರಾಂತಿ ಆಗಮನಕ್ಕೆ ಡೇಟ್ ಫಿಕ್ಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಇಷ್ಟು ದಿನಗಳ ಚಿತ್ರದ ಕುರಿತು ಹೆಚ್ಚು ಮಾಹಿತಿ ಬಿಟ್ಟುಕೊಡದ ಚಿತ್ರತಂಡ ಇದೀಗ ಸದ್ದಿಲ್ಲದೆ ಸಿನಿಮಾ ಮುಗಿಸಿ ರಿಲೀಗೆ ಎದುರು ನೋಡುತ್ತಿದೆ. ಕ್ರಾಂತಿ ದರ್ಶನ್ ನಟನೆಯ 55ನೇ ಚಿತ್ರವಾಗಿದ್ದು ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟ ಇದೆ. ಅವನತಿಯತ್ತ ಸಾಗುತ್ತಾ ಇರುವ ಸರ್ಕಾರಿ ಶಾಲೆಗಳನ್ನು ಉಳಿಸುವುದು ಹೇಗೆ ಮತ್ತು ಸರ್ಕಾರಿ ಶಾಲೆಗಳು ಅವನತಿ ಹೊಂದಿದರೆ ಏನೆಲ್ಲಾ ಆಗುತ್ತದೆ ಎನ್ನುವ ಬಗ್ಗೆ ‘ಕ್ರಾಂತಿ’ ಸಿನಿಮಾದ ಮೂಲಕ ಹೇಳಲು ಮುಂದಾಗಿದೆ ಚಿತ್ರತಂಡ. ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಬಳಿಕ ಅಭಿಮಾನಿಗಳು ದಚ್ಚು ಚಿತ್ರಕ್ಕಾಗಿ ಕಾದು ಕೂತಿದ್ದಾರೆ. ಯಾವಾಗಪ್ಪ ದರ್ಶನ್ ದರ್ಶನ ಕೊಡ್ತಾರೆ ಎಂದು ಕಾದು ಕೂತಿರೋ ಅಭಿಮಾನಿಗಳಿಗೆ ನಿರ್ಮಾಪಕಿ ಶೈಲಾಜ ನಾಗ್ ಉತ್ತರ ನೀಡಿದ್ದಾರೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಕ್ರಾಂತಿ ಸಿನಿಮಾ  ಜನವರಿ 26ಕ್ಕೆ ವಿಶ್ವದಾದ್ಯಂತ ತೆರೆ ಕಾಣಲಿದೆ. ಸರ್ಕಾರಿ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ನಟ ದರ್ಶನ್ ಪಾತ್ರ ಮಾಡಿದ್ದು ಎನ್‌ಆರ್‌ಐ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ದರ್ಶನ್ ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಬಣ್ಣ ಹಚ್ಚಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now