ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇಂದು ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ
ಭಕ್ತರಿಗೆ ಮೂರು ಸಾಲಿನಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತ್ಯೇಕ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಮಳೆ-ಬಿಸಿಲು ರಕ್ಷಣೆಗೆ ಟೆಂಟ್ ನಿರ್ಮಿಸಲಾಗಿದೆ. ದೇವಸ್ಥಾನದ ಮುಂಭಾಗ ಬೆಳಗ್ಗೆ 6.30 ರಿಂದ ರಾತ್ರಿ 8.30 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಆವರಣದಲ್ಲಿ ದಾನಿಗಳು ಭಕ್ತರಿಗೆ ಬಾಳೆಲೆ ಊಟಕ್ಕೆ ವ್ಯವಸ್ಥೆ ಮಾಡಿದ್ದಾರೆ. ಪ್ರಸಾದ ರೂಪದಲ್ಲಿ ಹಾರ್ಲಿಕ್ಸ್, ಮೈಸೂರು ಪಾಕ್ ವಿತರಣೆ ಮಾಡಲು ಶ್ರೀಚಾಮುಂಡೇಶ್ವರಿ ಸೇವಾ ಸಮಿತಿ ಮುಂದಾಗಿದೆ.
30 ಮಂದಿ ಬಾಣಸಿಗರು 30 ಸಾವಿರ ಮೈಸೂರು ಪಾಕ್ ತಯಾರಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಇದೆ. ಭಕ್ತರು ಲಲಿತ್ ಮಹಲ್ ಬಳಿಯ ಮೈದಾನದಲ್ಲಿ ತಮ್ಮ ವಾಹನ ನಿಲ್ಲಿಸಿ, ಉಚಿತವಾಗಿ ಬಸ್ನಲ್ಲಿ ಬೆಟ್ಟಕ್ಕೆ ಹೋಗುವ ವ್ಯವಸ್ಥೆ ಇದೆ.

