ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಾವಿನಲ್ಲೂ ಸಾರ್ಥಕತೆ ಮೆರೆದ 18ರ ಯುವತಿ: ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ
ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಧನ್ಯವಾದ ಹೇಳಿದ್ದಾರೆ. ರಕ್ಷಿತಾ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕಡೂರಿನ ಸೋಮನಹಳ್ಳಿ ತಾಂಡಾಗೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಲಾಯಿತು.
ತಂದೆ, ತಾಯಿ, ದೊಡ್ಡಪ್ಪ,ಚಿಕ್ಕಪ್ಪ ಸೇರಿದಂತೆ ತುಂಬು ಕುಟುಂಬದಲ್ಲಿ ಬೆಳೆದ ರಕ್ಷಿತಾ 14 ಜನ ಅಣ್ಣತಮ್ಮಂದಿರ ಮುದ್ದಿನ ತಂಗಿ. ಈಕೆಯನ್ನು ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದರು. ಆದರೆ ಕೊನೆಗೂ ಆದರೆ ರಕ್ಷಿತಾ ಮೆದುಳು ಸಂಪೂರ್ಣ ನಿಷ್ಕ್ರಿಯವಾದ ಹಿನ್ನೆಲೆಯಲ್ಲಿ ಹೆತ್ತವರು ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಅದರಂತೆ 9 ಜನರಿಗೆ ರಕ್ಷಿತಾಳ ಅಂಗಾಂಗ ದಾನ ಮಾಡಲಾಗಿದ್ದು ಕುಟುಂಬಸ್ಥರ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
