ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆಗೆ ಸಹಕರಿಸದೆ ಆಸ್ಪತ್ರೆ ಸುತ್ತಾಟ
ಗುರುವಾರ ರಾತ್ರೋರಾತ್ರಿ ಬಂಧನಕ್ಕೊಳಗಾದ ಶ್ರೀಗಳು ಶುಕ್ರವಾರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಶ್ರೀಗಳ ಜಾಮೀನು ಅರ್ಜಿ ರದ್ದಾದ ಹಿನ್ನೆಲೆಯಲ್ಲಿ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಪೊಲೀಸ್ ಕಸ್ಟಡಿ ಅವಧಿ ಮುಗಿಯೋವರೆಗೂ ಜಾಮೀನು ಅರ್ಜಿ ಸಲ್ಲಿಸದಂತೆ ಕೋರ್ಟ್ ಸೂಚಿಸಿದೆ.
ಘಟನೆಯ ಬಳಿಕ ಮಠದಲ್ಲಿ ಮೌನ ಮನೆ ಮಾಡಿದೆ. ಭಾನುವಾರ ಬಂತೆಂದರೆ ಭಕ್ತರಿಂದ ತುಂಬಿ ತುಳುಕುತ್ತಿದ್ದ ಮುರುಘಾ ಮಠದಲ್ಲಿ ಇಂದು ಜನವೇ ಇಲ್ಲದಂತಾಗಿದೆ. ಮಠದ ಸಿಬ್ಬಂದಿ ಹೊರತು ಪಡಿಸಿ ಯಾರು ಕೂಡ ಮಠದತ್ತ ಮುಖ ಹಾಕುತ್ತಿಲ್ಲ. ಮುರುಘಾ ಮಠದಲ್ಲಿ ಪ್ರತಿತಿಂಗಳು ಕಲ್ಯಾಣೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ 9 ಜೋಡಿಗಳು ಕಲ್ಯಾಣೋತ್ಸವಕ್ಕೆ ನೊಂದಣಿ ಮಾಡಿಕೊಂಡಿದ್ದು ಅದರಲ್ಲಿ ಎರಡು ಜೋಡಿಗಳು ಮದುವೆ ರದ್ದು ಮಾಡಿಕೊಂಡಿದ್ದಾರೆ.
