ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಳಿ ಕೈಯಲ್ಲಿ ಸಿಗರೇಟು: ಹಿಂದೂಗಳಾದರೆ ಬೇಕಾದ್ದು ಮಾಡಬಹುದಾ? ಪ್ರಮೋದ್ ಮುತಾಲಿಕ್ ಕಿಡಿ
ಇದಕ್ಕೆ ಕಾರಣ ಹಿಂದೂಗಳ ದೌರ್ಬಲ್ಯ. ಹಿಂದೂ ಸಮಾಜ ಒಗ್ಗಟ್ಟಾಗಿ ಪ್ರತಿಕ್ರಿಯೆ ಮಾಡದೇ ಇರುವುದೇ ಇದಕ್ಕೆ ಕಾರಣ. ಈ ರೀತಿಯ ಘಟನೆ ಇದೇ ಮೊದಲೇನಲ್ಲ. ಈ ಹಿಂದೆಯೂ ಅವಮಾನಕರ ಚಿತ್ರೀಕರಣ ಮಾಡಿದ್ದಾರೆ. ಚಪ್ಪಲಿ, ಬನಿಯನ್, ಶೌಚಾಲಯಗಳಲ್ಲಿ ಅಶ್ಲೀಲವಾಗಿ ಚಿತ್ರೀಕರಿಸಿ ಅವಮಾನ ಮಾಡಿದ್ದಾರೆ. ಮುಂದೆಯೂ ಈ ರೀತಿ ಆಗಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾನೂನು ದುರ್ಬಲವಾಗಿವೆ. ತಕ್ಷಣ ಕ್ರಮ ಕೈಗೊಳ್ಳುವುದಿಲ್ಲ. ಮುಸ್ಲಿಮರಾದರೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತದೆ. ಒಬ್ಬ ನ್ಯಾಯಮೂರ್ತಿ ಇಡೀ ದೇಶದಲ್ಲಿ ನೂಪುರ್ ಶರ್ಮಾ ಅವರಿಂದ ಗಲಭೆ ಆಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ ಕಾಳಿಕಾ ಮಾತೆಯ ಕೈಯಲ್ಲಿ ಸಿಗರೇಟ್ ಇಟ್ಟು ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಅವರಿಂದಲೂ ಗಲಾಟೆ ಆಗುತ್ತದೆ ಎಂದು ಹೇಳಿ, ಒದ್ದು ಒಳಗೆ ಹಾಕೋಕಾಗಲ್ವಾ? ಹಿಂದೂಗಳಾದರೆ ಬೇಕಾದ್ದು ಮಾಡಬಹುದಾ? ಎಂದು ಪ್ರಶ್ನಿಸಿದರು.
ಈ ಬೆಳವಣಿಯಿಂದ ನ್ಯಾಯಾಂಗ ವ್ಯವಸ್ಥೆಯೂ ಕಡೆಗಣನೆಯಾಗುತ್ತಿದೆ. ಎಂ.ಎಫ್.ಹುಸೇನ್ ಹಿಂದೂ ದೇವತೆಗಳನ್ನು ವಿರೂಪಗೊಳಿಸಿದ ಚಿತ್ರೀಕರಣ ಮಾಡಿದ್ದರು. ಆ ಸಂದರ್ಭದಲ್ಲಿಯೂ ಹಿಂದೂ ಸಮಾಜ ನ್ಯಾಯ ಸಮ್ಮತವಾಗಿಯೇ ಹೋರಾಟ ಮಾಡಿತ್ತು. 1 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಇದರಿಂದ ಎಂ.ಎಫ್.ಹುಸೇನ್ ಓಡಿಯೇ ಹೋದ. ಇವತ್ತು ಸ್ವಯಂಪ್ರೇರಿತವಾಗಿ ದಾಖಲಿಸಬೇಕಿತ್ತು. ಸರ್ಕಾರ ಹಾಗೂ ಪೊಲೀಸ್ ಇಲಾಖೆ ದುರ್ಬಲವಾಗಿರುವುದರಿಂದಲೇ ಇದೆಲ್ಲವೂ ಆಗುತ್ತಿದೆ ಎಂದು ಎಚ್ಚರಿಸಿದ್ದಾರೆ.
