• March 15, 2026

ಅನುಶ್ರೀ ಕೈಯಿಂದ ದುಬಾರಿ ಉಡುಗೊರೆ ಪಡೆದ ಕಾಫಿ ನಾಡು ಚಂದು

ತಮ್ಮದೇ ಶೈಲಿಯಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಕಾಫಿ ನಾಡು ಚಂದುಗೆ ದುಬಾರಿ ಉಡುಗೊರೆಯೊಂದು ಸಿಕ್ಕಿದೆ. ಜೀ ಕನ್ನಡದ ರಿಯಾಲಿಟಿ ಶೋಗೆ ಅತಿಥಿಯಾಗಿ ಬಂದಿದ್ದ ಕಾಫಿ ನಾಡು ಚಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಖುಷಿ ಪಟ್ಟಿದ್ದಾರೆ.  ಬಳಿಕ ಕಾಫಿ ನಾಡು ಚಂದುಗೆ ಅನುಶ್ರೀ ಉಡುಗೊರೆಯೊಂದನ್ನು ನೀಡಿದ್ದಾರೆ. ಕಾಫಿ ನಾಡು ಚಂದು ಅವರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಬೇಕು ಎಂಬುದು ಬಹುದಿನಗಳ ಕನಸಾಗಿತ್ತು.ಇದೀಗ ಅದು ಡಿಕೆಡಿ ವೇದಿಕೆಯಲ್ಲಿ ನೆರವೇರಿದೆ. ಡಿಕೆಡಿ ಕಾರ್ಯಕ್ರಮಕ್ಕೆ ಬಂದ ಕಾಫಿ ನಾಡು ಚಂದು ಅವರನ್ನು ಎಲ್ಲರು ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಈ ವೇಳೆ ಚಂದುಗೆ ಅನುಶ್ರೀ ವಾಚ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಚಂದು ಕೈಗೆ ವಾಚ್ ತೊಡಿಸಿದ ಅನುಶ್ರೀ ‘ಚೆನ್ನಾಗಿ ಹಾಡಿ. ಇನ್ನೂ ನಾಲ್ಕೈದು ಜನರಿಗೆ ನೀವು ಸಹಾಯ ಮಾಡಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಅಲ್ಲದೆ ಶಿವಣ್ಣ ಕೂಡ ಚಂದು ಬಗ್ಗೆ ಮೆಚ್ಚಿಗೆ ಮಾತನಾಡಿದ್ದು ಇಂತಹ ಅಭಿಮಾನಿಯನ್ನು ಪಡೆಯೋಕೆ ಪುಣ್ಯ ಮಾಡಿರಬೇಕು ಎಂದರು. ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಅನುಶ್ರೀ ಕೈಯಿಂದ ಉಡುಗೊರೆ ಪಡೆದ ಚಂದುಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್​’ ವೇದಿಕೆಯಲ್ಲಿ ಏನು ನಡೆಯಿತು ಎಂಬುದರ ಝಲಕ್​ ತೋರಿಸುವ ಪ್ರೋವೋವನ್ನು ಕೂಡ ಕಾಫಿ ನಾಡು ಚಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now