• January 1, 2026

ನಟ ಚೇತನ್ ವಿರುದ್ಧ ಪಂಜರ್ಲಿ ದೈವಕ್ಕೆ ದೂರು ನೀಡಲು ಮುಂದಾದ ದೈವಾರಾಧಕರು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ನೋಡಿ ಭೂತಾರಾಧನೆಯ ಕುರಿತು ನಟ ಚೇತನ್ ಹೇಳಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದೀಗ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ದೈವರಾಧಕ ಕುಮಾರ ಪಂಪದ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ಸೇವೆ ಮಾಡುವ ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ಇದೀಗ ನಟ ಚೇತನ್ ನೀಡಿರುವ ಹೇಳಿಕೆಯ ಕುರಿತು ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. ನಟರಿಗೆ ನಟನೆ ಮಾಡಲು ಗೊತ್ತಿರಬಹುದು. ಆದರೆ ನಾವು ದೈವಾರಾಧಕರು ನಮಗೆ ನಟಿಸಲು ಗೊತ್ತಿಲ್ಲ. ನಾವು ತಲೆತಲಾಂತರಗಳಿಂದ ಸತ್ಯವನ್ನು ಪಾಲನೆ ಮಾಡಿಕೊಂಡು ಬಂದವರು. ಭೂತಾರಾಧನೆಗೆ ಇಂತಿಷ್ಟು ವರ್ಷದ ಹಿನ್ನೆಲೆ ಎಂಬ ದಾಖಲೆ ನಮ್ಮಲ್ಲಿ ಇಲ್ಲ. ಯಾವುದೋ ಒಂದು ಪುಸ್ತಕ ಹಿಡಿದುಕೊಂಡು ಮಾತನಾಡುವುದು ತಪ್ಪು ಎಂದರು. ಕರಾವಳಿಯಾದ್ಯಂತ ಪರವ, ಪಂಪದ ನಲಿಕೆಯವರು ಜೀವಿಸುತ್ತಿದ್ದೇವೆ. ಚೇತನ್ ಹೇಳಿರುವ ಅಲೆಮಾರಿಗಳು ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ. ನಮ್ಮ ಹಿರಿಯರ ಕಾಲದಿಂದ ನಾವು ಹಿಂದೂ ಸಂಪ್ರದಾಯವನ್ನು ಆರಾಧನೆ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ದೈವಗಳಿಗೆ ಮೂಲ ಶಬ್ದವೇ ತುಳು. ನಾವು ನಂಬಿಕೊಂಡ ಸತ್ಯದ ಮೂಲಕ ಚೇತನ್ ಗೆ ಪ್ರತಿಕ್ರಿಯೆ ನೀಡುತ್ತವೆ ಎಂದು ತಿಳಿಸಿದರು. ನಟ ಚೇತನ್ ಬಹಳ ದೊಡ್ಡ ಜ್ಞಾನಿ ಆಗಿರಬಹುದು. ನಮ್ಮ ನೆಲ, ನಮ್ಮ ಕುಲ ನಮ್ಮ ಆಚರಣೆಯ ಬಗ್ಗೆ ಮಾತನಾಡುವ ಜ್ಞಾನ ಇವರಿಗೆ ಇಲ್ಲ. ವ್ಯಕ್ತಿಗತವಾಗಿ ಇವರಿಗೆ ನಾವು ಉತ್ತರ ಕೊಡುವುದಿಲ್ಲ ಎಂದು ಚೇತನ್ ಕುಮಾರ್ ಹೇಳಿಕೆಯ ಕುರಿತು ಅಸಮಾಧಾನ ಹೊರ ಹಾಕಿದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now