ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಡೊಳ್ಳು ಭಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಾಣವಾಗಿರುವ ಡೊಳ್ಳು ಚಿತ್ರವನ್ನು ಸುನಿಲ್ ಪುರಾಣಿಕ್ ಪುತ್ರ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದಾರೆ. ಪವನ್ ಒಡೆಯಾರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾದಲ್ಲಿ ನಟ ಕಾರ್ತಿಕ್ ಮಹೇಶ್ ಹಾಗೂ ನಟಿ ನಿಧಿ ಹೆಗಡೆ ಕಾಣಿಸಿಕೊಂಡಿದ್ದಾರೆ.
ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಒರಾಯನ್ ಮಾಲ್ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದೆ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಚಿತ್ರ ನಿರ್ಮಾಣ ಮಾಡಿರುವ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರಿಗೆ ಅಭಿನಂದನೆಗಳು. ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗೂ ಮಾಜಿ ಸಚಿವರಾದ ಜಮೀರ್ ಅಹ್ಮದ್ ಅವರು ನನ್ನೊಂದಿಗೆ ಚಿತ್ರ ವೀಕ್ಷಿಸಿದರು’ ಎಂದು ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದು ಜೊತೆಗೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.ಒರೈಯನ್ ಮಾಲ್ ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದೆ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರ ತಂಡಕ್ಕೆ ನನ್ನ ಶುಭ ಹಾರೈಕೆಗಳು. 1/2 pic.twitter.com/jSWJgmMBfI
— Siddaramaiah (@siddaramaiah) August 23, 2022
