• March 15, 2026

ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಟಿವಿ ಹಾಗೂ ಸಾಮಾಜಿಕ ಜಾಲಾ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಓರಾಯನ್ ಮಾಲ್ ನಲ್ಲಿ ಸಚಿವ ಜಮೀರ್ ಅಹಮದ್ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ಡೊಳ್ಳು ಸಿನಿಮಾದ ನಿರ್ಮಾಪಕರಾದ ಪವನ್ ಒಡೆಯಾರ್ ತಂಡ ಇತ್ತೀಚೆಗೆ ಸಿನಿಮಾ ವೀಕ್ಷಿಸುವಂತೆ ಸಿದ್ದರಾಮಯ್ಯರಿಗೆ ಆಹ್ವಾನ ನೀಡಿದ್ದರು. ಡೊಳ್ಳು ತಂಡದ ಪ್ರೀತಿಯ ಆಮಂತ್ರಣಕ್ಕೆ ಒಗೊಟ್ಟ ಸಿದ್ದು ನಿನ್ನೆ ಸಿನಿಮಾ ತಂಡದ ಜೊತೆ ಚಿತ್ರವನ್ನು ವೀಕ್ಷಿಸಿದರು. ಡೊಳ್ಳು ಭಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಾಣವಾಗಿರುವ ಡೊಳ್ಳು ಚಿತ್ರವನ್ನು ಸುನಿಲ್ ಪುರಾಣಿಕ್ ಪುತ್ರ ಸಾಗರ್ ಪುರಾಣಿಕ್ ನಿರ್ದೇಶನ ಮಾಡಿದ್ದಾರೆ. ಪವನ್ ಒಡೆಯಾರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾದಲ್ಲಿ ನಟ ಕಾರ್ತಿಕ್ ಮಹೇಶ್ ಹಾಗೂ ನಟಿ ನಿಧಿ ಹೆಗಡೆ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಒರಾಯನ್ ಮಾಲ್​ನ ಚಿತ್ರಮಂದಿರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದೆ. ನಾಡಿನ ಸಾಂಪ್ರದಾಯಿಕ ಡೊಳ್ಳು ಬಾರಿಸುವ ಕಲೆಯನ್ನು ಪ್ರಧಾನವಾಗಿರಿಸಿಕೊಂಡು ನಿರ್ಮಿಸಿದ ಈ ಸಿನಿಮಾ ಅತ್ಯಂತ ಸೊಗಸಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ನನ್ನ ಶುಭ ಹಾರೈಕೆಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ‘ನಾಡಿನ ಜಾನಪದ ಕಲೆಯನ್ನು ಜಗತ್ತಿನ ಮುಂದೆ ತೆರೆದಿಡುವಂತಹ ಚಿತ್ರ ನಿರ್ಮಾಣ ಮಾಡಿರುವ ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ನಿರ್ಮಾಪಕರಾದ ಪವನ್ ಒಡೆಯರ್, ಅಪೇಕ್ಷಾ ಒಡೆಯರ್ ಅವರಿಗೆ ಅಭಿನಂದನೆಗಳು. ನಾಯಕ ನಟ ಕಾರ್ತಿಕ್ ಮಹೇಶ್, ನಾಯಕಿ ನಿಧಿ ಹೆಗಡೆ ಹಾಗೂ ಮಾಜಿ ಸಚಿವರಾದ ಜಮೀರ್​ ಅಹ್ಮದ್ ಅವರು ನನ್ನೊಂದಿಗೆ ಚಿತ್ರ ವೀಕ್ಷಿಸಿದರು’ ಎಂದು ಸಿದ್ದರಾಮಯ್ಯ ಪೋಸ್ಟ್​ ಮಾಡಿದ್ದು ಜೊತೆಗೆ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.  

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now