ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರದ ವರಾಹ ರೂಪಂ ಹಾಡಿಗೆ ತಡೆ ಸಂಕಷ್ಟ ತಂದ ಪಾಲಕ್ಕಾಡ್ ಕೋರ್ಟ್
ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.
‘ಕೋರ್ಟ್ನ ಆದೇಶದ ಪ್ರತಿ ಕೈ ಸೇರಿದ ನಂತರದಲ್ಲಿ ಕಾಂತಾರ ತಂಡದವರು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ತುಂಬಾನೇ ಮುಖ್ಯ. ನಮಗೆ ಕ್ರೆಡಿಟ್ ಕೊಟ್ಟರೆ ಈ ಹಾಡನ್ನು ಅವರು ಪ್ಲೇ ಮಾಡಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದು ‘ತೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ನ ವಿಯಾನ್ ಫರ್ನಾಂಡಿಸ್ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದರು.
