• March 14, 2026

ಠಾಣೆ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಧ್ರುವ ಸರ್ಜಾ

ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡು, ಸಾಕಷ್ಟು ಸಾಹಸ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಪ್ರವೀಣ್ ಇದೀಗ ನಾಯಕನಾಗಿ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಗಾಯತ್ರಿ ಎಂ ನಿರ್ಮಾಣದ ಭಗತ್ ರಾಜ್ ನಿರ್ದೇಶನದ ಠಾಣೆ ಚಿತ್ರದಲ್ಲಿ ಪ್ರವೀನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಠಾಣೆ ಚಿತ್ರದ ಪೋಸ್ಟರ್ ರಿಲೀಸ್ ಮಾಡುವು ನಟ ಧ್ರುವ ಸರ್ಜಾ ಹೊಸಬರ ತಂಡಕ್ಕೆ ಸಾಥ್ ನೀಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿದ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ನಟ, ನಿರ್ದೇಶಕ ಕಾಶಿನಾಥ್, ರಾಮನಾಥ್ ಋಗ್ವೇದಿ, ಗುರುಪ್ರಸಾದ್ ಮುಂತಾದವರ ಬಳಿ ಕೆಲಸ ಮಾಡಿರುವ ಎಸ್ ಭಗತ್ ರಾಜ್ ಠಾಣೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಈ ಹಿಂದೆ ‘ದಿ ಸೂಟ್’ ಸಿನಿಮಾದ ನಿರ್ದೇಶಿಸಿದ್ದ ಭಗತ್ ರಾಜ್ ಗೆ ಇದು ಎರಡನೇ ಸಿನಿಮಾ. ‘ಠಾಣೆ’ ಚಿತ್ರದಲ್ಲಿ 1962ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಹೇಳಲು ನಿರ್ದೇಶಕರು ಮುಂದಾಗಿದ್ದಾರೆ. ಸ್ಲಂ ನಲ್ಲೇ ಹುಟ್ಟಿಬೆಳೆದ ಯುವಕ‌ ಅಲ್ಲಿನ ಜನರಿಗೆ ನ್ಯಾಯ ಕೊಡಿಸಲು ಹೋರಾಡುವ ಕಥೆಯನ್ನು ಠಾಣೆ ಸಿನಿಮಾ ಒಳಗೊಂಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now