ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಡ್ರಾಮಾ ಜ್ಯೂನಿಯರ್ ಪಟ್ಟ ಪಡೆದ ಕುಂದಾಪುರದ ಸಮೃದ್ಧಿ
ಕಾರ್ಯಕ್ರಮದ ಗುಣಮಟ್ಟ ಹಾಗು ವಿಶೇಷತೆಗೆ ಸಾಕ್ಷಿಯಂತೆ ಇಬ್ಬರು ಪ್ರತಿಭೆಗಳು ಚಾಮರಾಜನಗರದ ಗೌತಮ್ ರಾಜ್ ಮತ್ತು ಉಡುಪಿಯ ಸಾನಿಧ್ಯ ಆಚಾರ್ ಸಮಬಲ ಸಾಧಿಸಿಕೊಂಡು ಎರಡನೇ ಸ್ಥಾನ ಪಡೆದಿದ್ದಾರೆ ಹಾಗು ತಲಾ ಮೂರು ಲಕ್ಷ ರೂಪಾಯಿ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಮಂಗಳೂರಿನ ವೇದಿಕ್ ಅವರು ಮೂರನೇ ಸ್ಥಾನ ಪಡೆದು ಜನಮೆಚ್ಚುಗೆಗಳಿಸಿದರು. ಈ ಸೀಸನ್ ವಿಶಿಷ್ಟ ಪ್ರತಿಭೆಯಾಗಿ ವೇದಿಕೆಗೆ ಆಗಮಿಸಿದ ರಾಯಚೂರಿನ ಕುಳ್ಳ ಸಿಂಗಂ ಖ್ಯಾತಿಯ ಅರುಣ್ ಅವರಿಗೆ ವಿಶೇಷ ಬಹುಮಾನವಾಗಿ ಒಂದು ಲಕ್ಷ ರುಪಾಯಿ ನಗದು ಬಹುಮಾನವನ್ನು ಸಹ ನೀಡಿ ವೇದಿಕೆ ಸಾರ್ಥಕತೆ ಮೆರೆಯಿತು. ಅಷ್ಟೇ ಅಲ್ಲದೆ ಈ ಎಲ್ಲಾ ಬಹುಮಾನಗಳು ಆ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಕೆ ಆಗುತ್ತಿರುವುದು ವಿಶೇಷ.
ಈ ಶೋ ನಿರ್ದೇಶಕ ಹಾಗು ಜೀ ಕನ್ನಡ ವಾಹಿನಿಯ ನಾನ್ ಫಿಕ್ಷನ್ ಮುಖ್ಯಸ್ಥರಾದ ಶರಣಯ್ಯ ಅವರು ಮಾತನಾಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿಭಾಯಿಸಿದ ಎಲ್ಲಾ ಕಾರ್ಮಿಕರನ್ನು, ಮೆಂಟರ್ ರನ್ನು, ತೀರ್ಪುಗಾರರನ್ನು , ಕ್ಯಾಮರಾ ಮ್ಯಾನ್ಗಳನ್ನು, ಸ್ಕಿಟ್ ಬರಹಗಾರರಿಗೆ ಪ್ರಶಂಸೆ ನೀಡಿದರು.
ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರು ರವರು ಮಾತನಾಡಿ ಎಲ್ಲಾ ಮಕ್ಕಳಿಗೂ ಅಭಿನಂದಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿ ವೀಕ್ಷಕರನ್ನು ನಕ್ಕು ನಗಿಸಲು ಕಾಮಿಡಿ ಕಿಲಾಡಿಗಳು ಸೀಸನ್ 4 ಶುರುವಾಗಲಿದೆ ಎಂದು ಮಾಹಿತಿ ನೀಡಿದರು. ಜೊತೆಗೆ ಎಂದಿನಂತೆ ಈ ಸೀಸನ್ ನಲ್ಲೂ ನಿರ್ದೇಶಕ ಯೋಗರಾಜ್ ಭಟ್, ನವರಸನಾಯಕ ಜಗ್ಗೇಶ್ ಮತ್ತು ಕ್ರೇಜಿ ಕ್ವೀನ್ ರಕ್ಷಿತಾ ರವರು ತೀರ್ಪುಗಾರರಾಗಿ ಮುಂದುವರೆಯುತ್ತಾರೆ ಜೊತೆಗೆ ಮಾಸ್ಟರ್ ಆನಂದ್ ನಿರೂಪಕರಾಗಿರುತ್ತಾರೆ ಎಂದು ತಿಳಿಸಿದರು.
