• June 13, 2026

ಖ್ಯಾತ ಗಾಯಕ ಸಿಧು ಮೂಸೆವಾಲ ಹಂತಕರಿಗೆ ಶೂಟೌಟ್: ಗುಂಡಿನ ದಾಳಿಗೆ ನಾಲ್ವರು ಬಲಿ

ಖ್ಯಾತ ಗಾಯಕ ಸಿಧು ಮೂಸೆವಾಲ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಶಂಕಿತ ನಾಲ್ವರು ಆರೋಪಿಗಳು ಇಂದು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಪೊಲೀಸರು ಹಾಗೂ ಗ್ಯಾಂಗ್ ಸ್ಟಾರ್ ಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಂಕಿತರು ಬಲಿಯಾಗಿದ್ದು ಜನರು ಮನೆಯಿಂದ ಹೊರ ಬರದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಂಜಾಬ್ ನ ಅಮೃತಸರದ ಸಮೀಪದ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ಸುರಿಮಳೆ ಗೈದಿದ್ದಾರೆ. ಪಾಕ್ ಗಡಿಯಿಂದ ಸುಮಾರು 10 ಕಿಮೀ ದೂರದ ಹಳ್ಳಿಯಲ್ಲಿ ಈ ಶೂಟೌಟ್ ನಡೆದಿದೆ. ಅಟ್ಟಾರಿ ಅಂತಾರಾಷ್ಟ್ರೀಯ ಗಡಿ ಸಮೀಪದ ಹೋಶಿಯಾರ್ ನಗರದ ಭಾಕ್ನಾ ಗ್ರಾಮದಲ್ಲಿ ಗ್ಯಾಂಗ್ ಸ್ಟರ್ ಗಳಾದ ಮನ್ ಪ್ರೀತ್ ಮನ್ನು, ಜಗರೂಪ್ ರೂಪ್ ಸೇರಿದಂತೆ ಒಟ್ಟು ನಾಲ್ವರ ಮೇಲೆ ಗುಂಡಿನ ಸುರಿಮಳೆಗೈದಿದ್ದು ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿರೋದಾಗಿ ಪೊಲೀಸರು ತಿಳಿಸಿದ್ದಾರೆ.      

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now