• February 10, 2026

ಮುರುಘ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯನ್ನಾಗಿ ನೇಮಿಸಿ: ಮಾಜಿ ನಗರಸಭೆ ಅಧ್ಯಕ್ಷ

ಚಿತ್ರದುರ್ಗ: ಪೋಕ್ಸೋ ಪ್ರರಕಣದಲ್ಲಿ ಜೈಲು ಸೇರಿರುವ ಮುರುಘ ಮಠದ ಮುರುಘ ಶ್ರೀ ಸ್ಥಾನಕ್ಕೆ ನೂತನ ಪೀಠಾಧಿಪತಿ ನೇಮಿಸುವಂತೆ ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಶೂನ್ಯ ಪೀಠ ಪರಂಪರೆಯ ಮುರುಘಾ ಮಠಕ್ಕೆ ಶೂದ್ರರನ್ನು ಪೀಠಾಧಿಪತಿಯಾಗಿ ನೇಮಿಸುವಂತೆ ಚಿತ್ರದುರ್ಗ ನಗರಸಭೆಯ ಮಾಜಿ ಅಧ್ಯಕ್ಷ ಬಿ.ಕಾಂತರಾಜ್ ಹೇಳಿಕೆ ನೀಡಿದ್ದು ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುರುಘಾ ಶ್ರೀ  ಬದಲಾವಣೆಗೆ ಸಭೆ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂತರಾಜ್, ಶೂನ್ಯಪೀಠದ ಪರಂಪರೆಯ ಮಠದಲ್ಲಿ ಸರ್ವಧರ್ಮ, ಜಾತಿಗಳಿಗೂ ಸಮಾನ ಹಕ್ಕು ನೀಡಿರುವ ಪೀಠ ಇದಾಗಿದೆ. ಕೇವಲ ಒಂದು ಸಮುದಾಯಕ್ಕೆ ಮಠ ಸೀಮಿತವಾಗಿಲ್ಲ. ಮುರುಘಾಶ್ರೀ ಬದಲಾವಣೆಗೆ ಕೇವಲ ಒಂದು ಕೋಮಿನವರಿಗೆ ಅಧಿಕಾರ ಕೊಟ್ಟವರ್ಯಾರು? ಇದು ಬಸವತತ್ವದಡಿ ಬೆಳೆದು ನಿಂತಿರುವ ಪೀಠವಾಗಿದೆ ಎಂದು ಆಕ್ರೋಶ ಹೊರ ಹಾಕಿದರು. ಮುರುಘಾ ಪೀಠಾಧ ಮೂಲ ಪೀಠಾಧ್ಯಕ್ಷರಾಗಿದ್ದವರು ಶೂದ್ರರಾದ ಅಲ್ಲಮ್ಮ ಪ್ರಭು. ಆದರೆ ಮುರುಘಾ ಶ್ರೀ ವಿರುದ್ಧ ಕೇಳಿಬಂದಿರುವ ಪೋಕ್ಸೋ ಆರೋಪದ ಬೆನ್ನಲ್ಲೇ ಶೂನ್ಯಪೀಠವನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಿ ಸಭೆ ನಡೆಸಿದ್ದು ಸರಿಯಲ್ಲ. ಈ ಮುರುಘಾ ಮಠ ವೀರಶೈವ ಲಿಂಗಾಯತರ ಆಸ್ತಿಯಲ್ಲ. ಶೂದ್ರರನ್ನು ಮಠದಲ್ಲಿ ಕಡೆಗಣಿಸಲಾಗ್ತಿದೆ ಎಂದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now