ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿನ್ ಬಾಯಿಗೆ ಪೊರಕೆ ಇಡ್ಬೇಕಾ? ಸೋನು ಮೇಲೆ ಗರಂ ಆದ ಆರ್ಯವರ್ಧನ್ ಗುರೂಜಿ
ಆರ್ಯವರ್ಧನ್ ಗುರೂಜಿ ಅಡುಗೆ ಮಾಡುತ್ತಿದ್ದ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಮಾತಿಗೆ ಮಾತು ಬೆಳೆದು ಅದು ಜಗಳಕ್ಕೆ ತಿರುಗಿದ್ದು ಈ ವೇಳೆ ಸುಮ್ಮನಿರುವಂತೆ ಸೋನು ಶ್ರೀನಿವಾಸ್ ಗೌಡಗೆ ಗುರೂಜಿ ಹೇಳುತ್ತಲೇ ಇದ್ದರು. ಆದರೆ, ಸೋನು ಮಾತನಾಡುತ್ತಲೇ ಹೋಗಿದ್ದಾರೆ. ಜೊತೆಗೆ ನೀವು ಮಾತನಾಡುತ್ತೀರಿ ಎಂದು ಗುರೂಜಿಗೆ ಹೇಳಿದ್ದಾರೆ. ಸೋನು ಗೌಡರ ನಾನ್ ಸ್ಟಾಪ್ ಮಾತುಗಳನ್ನು ಕೇಳಿದ ಗುರೂಜಿ ಕೋಪಗೊಂಡು ‘ನಿನ್ ಬಾಯಿಗೆ ಪೊರಕೆ ಇಡ್ಬೇಕಾ? ಸುಮ್ನಿರ್ತಿಯಾ’ ಎಂದು ಆವಾಜ್ ಹಾಕಿದ್ದಾರೆ. ಅದನ್ನು ಕೇಳಿಸಿಕೊಂಡ ಸೋನು, ನೀವು ಈ ರೀತಿ ಮಾತನಾಡಬೇಡಿ ಎಂದು ತಿರುಗೇಟು ನೀಡುತ್ತಾರೆ.
ಸೋನು ಗೌಡ ಹೆಚ್ಚು ಮಾತನಾಡುತ್ತಾರೆ,ಮನೆಯಲ್ಲಿರುವ ಸ್ಪರ್ಧಿಗಳಿಗೆ ಮರ್ಯಾದೆ ಕೊಡುವುದಿಲ್ಲ ಎನ್ನುವುದು ಮನೆಯ ಇತರ ಸದಸ್ಯರ ವಾದ. ಅಲ್ಲದೆ ಇದೇ ವಿಚಾರವಾಗಿ ಸುದೀಪ್ ಕೂಡ ಸೋನು ಗೌಡಗೆ ಕ್ಲಾಸ್ ತೆಗೆದುಕೊಂಡಿದ್ದರು. ಇದೀಗ ಮತ್ತೆ ಮಾತಿಗೆ ಮಾತು ಬೆಳೆಸಿ ಮನೆಯಲ್ಲಿ ಕೆಲ ಕಾಲ ಗಲಾಟೆ ಮಾಡಿಕೊಂಡಿದ್ದಾರೆ.
