• January 1, 2026

ಚೇತನ್ ಗೆ ತಾಕತ್ತಿದ್ರೆ ಮಂಗಳೂರಿಗೆ ಬಂದು ಪ್ರಶ್ನೆ ಮಾಡಲಿ: ಕಾಂತಾರದ ಗುರುವ ಪಾತ್ರಧಾರಿ

ದೈವಾರಾಧನೆ ಹಿಂದೂ ಸಂಸ್ಕೃತಿಯೇ ಅಲ್ಲ ಎಂದು ಕಾಂತಾರ ಸಿನಿಮಾದ ಬಗ್ಗೆ ಹೇಳಿಕೆ ನೀಡಿರುವ ಆ ದಿನಗಳು ಖ್ಯಾತಿ ನಟ ಚೇತನ್ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದಿದ್ದಾರೆ. ಚೇತನ್ ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡ್ತಿದ್ದಾರೆ, ಚೇತನ್ ಸಿನಿಮಾಗಳು ಗೆಲ್ಲುತ್ತಿಲ್ಲ ಎಂಬ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ಸ್ವರಾಜ್ ಶೆಟ್ಟಿ ಚೇತನ್ ಗೆ ಸವಾಲು ಹಾಕಿದ್ದಾರೆ. ತಾಕತ್ತಿದ್ರೆ ನಟ ಚೇತನ್ ಮಂಗಳೂರಿಗೆ ಬಂದು ದೈವಾರಾಧನೆ ಬಗ್ಗೆ ಪ್ರಶ್ನೆ ಮಾಡಿ ಅಂತ ಸವಾಲು ಎಸೆದಿದ್ದಾರೆ. ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಲು ಅದು ಯಾವಾಗ ಬಂದಿರೋದು ಅಂತ ಯಾರಿಗಾದ್ರೂ ಗೊತ್ತಿದ್ಯಾ? ದೈವಾರಾಧನೆಯನ್ನ ತುಳುನಾಡಿಗರು ಮಾಡ್ತಾ ಇದಾರೆ. ಆದರೆ ಚೇತನ್ ರ ಹೇಳಿಕೆ ನಮ್ಮ ನಂಬಿಕೆಗೆ ಧಕ್ಕೆ ತರುವಂತಿದೆ ಎಂದಿದ್ದಾರೆ. ಭೂತಾರಾಧನೆ ಮತ್ತು ಹಿಂದುತ್ವದ ಸಂಬಂಧದ ಬಗ್ಗೆ ‌ಮಾತನಾಡಬಾರದು.‌ ಅದರ ಬಗ್ಗೆ ನಿಮಗೆ ಗೊತ್ತಿದ್ಯಾ? ನಿಮ್ಮಲ್ಲಿ ಸಾಕ್ಷ್ಯ ಏನಿದೆ? ನಮ್ಮ ಪೂರ್ವಜರು ಹೇಳಿದ್ದನ್ನು ನಾವು ಮಾಡಿಕೊಂಡು ಬರ್ತಾ ಇದೀವಿ.‌ ದೈವಾರಾಧನೆ ಮತ್ತು ಕಾಂತಾರದ ವಿಷಯ ಬೇಡ, ಸಿನಿಮಾ ಸಿನಿಮಾವಾಗಿಯೇ ಇರಲಿ ಎಂದಿದ್ದಾರೆ. ಅಲ್ಲದೇ ಚೇತನ್ ಒಬ್ಬ ನಟರಾಗಿ ಕಾಂತಾರವನ್ನು ಸಿನಿಮಾವಾಗಿಯೇ ನೋಡಿ ಖುಷಿ ಪಡಲಿ.‌ ಅದು ಬಿಟ್ಟು ಬೇಳೆ ಬೇಯಿಸಿ ಕೊಳ್ಳುವ ಕೆಲಸ ಬೇಡ ಎಂದಿದ್ದಾರೆ. ದೈವಾರಾಧನೆ ಇವತ್ತು ನಿನ್ನೆಯದಲ್ಲ, ಕಾಂತಾರ ನೋಡಿದ ನಂತರವೇ ಅದರ ಬಗ್ಗೆ ಅವರಿಗೆ ಗೊತ್ತಾಗಿದೆ. ಈಗ ಅವರು ನಮ್ಮ ಚಿತ್ರಕ್ಕೆ ಪ್ರಚಾರದ ಕೆಲಸ ಮಾಡ್ತಿದ್ದಾರೆ. ಆದರೆ ಇವರ ಪಬ್ಲಿಸಿಟಿ ನಮಗೆ ಬೇಕಾಗಿಲ್ಲ. ಆದರೂ ಅವರಿಗೊಂದು ದೊಡ್ಡ ಧನ್ಯವಾದ ಎಂದಿದ್ದಾರೆ.  ಕಾಂತಾರ ಸಿನಿಮಾ ಬಗ್ಗೆ ಮಾತು ಬೇಡ.‌ ಮಂಗಳೂರಿಗೆ ಬಂದು ಪ್ರಶ್ನೆ ಕೇಳುವ ತಾಕತ್ ಇದ್ರೆ ಚೇತನ್ ಬಂದು ಮಾತನಾಡಲಿ.‌ ನಾಳೆ ದೈವಕ್ಕೆ ಕೋಪ ಬಂದ್ರೆ ಅವನನ್ನು ಮಾತ್ರ ಖಂಡಿತಾ ಬಿಡಲ್ಲ. ಇದರಿಂದ ಸಿನಿಮಾಗೆ ಡ್ಯಾಮೇಜ್ ಇಲ್ಲ, ಇದರಿಂದ ಪಬ್ಲಿಸಿಟಿ ಅಷ್ಟೇ ಎಂದು ಸ್ವರಾಜ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now