• February 10, 2026

ಅಪ್ಪು ನಮ್ಮ ಜೊತೆ ನಮ್ಮ ನೆನಪಿನಲ್ಲಿ ಸದಾ ಜೀವಂತ: ಅಮಿತಾಬ್ ಬಚ್ಚನ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವೇ ಕಳೆದು ಹೋಗಿದೆ. ಆದರೆ ಅಪ್ಪು ಇಲ್ಲ ಎಂಬ ಕಹಿ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ನಿತ್ಯವು ಒಂದಲ್ಲ ಒಂದು ಕಾರಣಕ್ಕೆ ಪುನೀತ್ ನೆನಪಾಗುತ್ತಲೆ ಇರುತ್ತಾರೆ. ಇದೀಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪ್ಪು ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಅಪ್ಪು ಇಲ್ಲ ಎಂಬುದನ್ನು ಅಂದುಕೊಂಡು ಮಾತನಾಡಲು ಕಷ್ಟ ಆಗುತ್ತದೆ. ಅಪ್ಪು ಮಗುವಾಗಿದ್ದಾಗಲೇ ನಾನು ಅವರನ್ನು ಮೊದಲು ನೋಡಿದ್ದು. ಅಪ್ಪುವಿನಲ್ಲಿ ಸದಾ ಸೆಳೆಯುವ ಸಂಗತಿ ಅಂದ್ರೆ ಅವರ ನಗು. ಎಲ್ಲಾ ಕಡೆ, ಎಲ್ಲಾ ಸಂದರ್ಭದಲ್ಲೂ, ಯಾವಾಗಲೂ ಅವರ ಮುಖದಲ್ಲಿ ನಗು ಇರುತ್ತದೆ. ಅಪ್ಪು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಕೊನೆಯ ಚಿತ್ರ ಗಂಧದಗುಡಿಯಲ್ಲಿ ಅವರು ಅಭಿನಯಿಸಿಲ್ಲ. ಅವರು ಅವರಾಗಿಯೇ ಕಾಣಿಸ್ಕೊಂಡಿದ್ದಾರೆ’ ಎಂದು ಅಮಿತಾಬ್ ಬಚ್ಚನ್ ಬರೆದುಕೊಂಡಿದ್ದಾರೆ.   ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಬಗ್ಗೆ ಬರೆದುಕೊಂಡಿರುವ ಬಿಗ್ ಬಿ ‘ಗಂಧದ ಗುಡಿಯಲ್ಲಿ ಕರ್ನಾಟಕ  ವೈಭವದ ವನ್ಯ ಸಂಪತ್ತನ್ನು ತೆರೆದಿಟ್ಟಿದ್ದಾರೆ. ಅಪ್ಪು ಜೊತೆಗಿನ ಗಂಧದ ಗುಡಿ ಪಯಣ ಮಿಸ್ ಮಾಡ್ಕೋಬೇಡಿ. ಕಡ್ಡಾಯವಾಗಿ ಮಕ್ಕಳು ನೋಡಲೇಬೇಕಾದ ಸಿನಿಮಾ.  ವನ್ಯ ಸಂಪತ್ತಿನ ಕುರಿತು ಅರಿಯ ಬೇಕಾದ ಚಿತ್ರ. ಅಪ್ಪು ನಮ್ಮ ಜೊತೆ ನಮ ನೆನಪಿನಲ್ಲಿ ಸದಾ ಜೀವಂತ’ ಎಂದಿದ್ದಾರೆ. ಅಮಿತಾಬ್ ಬಚ್ಚನ್ ಪೋಸ್ಟ್ ಅನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಮಿತಾಬ್ ಹಾಗೂ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಸಾಕಷ್ಟು ಆತ್ಮೀಯತೆ ಇದೆ. ಅಪ್ಪು ಚಿಕ್ಕ ಹುಡುಗನಿದ್ದಾಗಿನಿಂದಲೂ ಅಮಿತಾಬ್ ಬಚ್ಚನ್ ಆತನೊಂದಿಗೆ ಒಡನಾಟ ಹೊಂದಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now