ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಭೂತಾರಾಧನೆಯ ಕುರಿತು ಹೇಳಿಕೆ: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು
ಈ ಹಿಂದೆ ಉಡುಪಿಯಲ್ಲಿ ಚೇತನ್ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿತ್ತು. ಈ ಸಂಬಂಧವಾಗಿ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ. ನಾವು ತಲೆತಲಾಂತರಗಳಿಂದ ಸತ್ಯವನ್ನು ಪಾಲನೆ ಮಾಡಿಕೊಂಡು ಬಂದವರು. ಭೂತಾರಾಧನೆಗೆ ಇಂತಿಷ್ಟು ವರ್ಷದ ಹಿನ್ನೆಲೆ ಎಂಬ ದಾಖಲೆ ನಮ್ಮಲ್ಲಿ ಇಲ್ಲ. ಯಾವುದೋ ಒಂದು ಪುಸ್ತಕ ಹಿಡಿದುಕೊಂಡು ಮಾತನಾಡುವುದು ತಪ್ಪು ಎಂದಿದ್ದರು.
ನಟ ರಿಷಬ್ ಶೆಟ್ಟಿ ಭೂತಕೋಲ, ದೈವಾರಾಧನೆ ಹಿಂದೂ ಸಂಸ್ಕೃತಿಯ ಭಾಗ ಎಂದು ಹೇಳಿದ್ದರು. ಕಾಂತಾರ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಈ ಮಾತನ್ನು ವಿರೋಧಿಸಿದ್ದ ನಟ ಚೇತನ್ ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ ಎಂದು ವಿರೋಧಿಸಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.
