• January 1, 2026

ಲಕ್ಕಿ ಮ್ಯಾನ್ ಸಿನಿಮಾವನ್ನು ಬಾಚಿ ತಬ್ಬಿಕೊಳ್ಳಿ, ಮತ್ತೆ ಬೇಕು ಎಂದರು ಸಿಗಲ್ಲ: ಕಿಚ್ಚ ಸುದೀಪ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳು ಕಳೆದಿದ್ರು ಇಂದಿಗೂ ಅಭಿಮಾನಿಗಳು ಅಪ್ಪು ನೆನಪಿನಲ್ಲೇ ಇದ್ದಾರೆ. ಪುನೀತ್ ನಟನೆಯ ಯಾವುದೇ ಸಿನಿಮಾ ಟಿವಿಯಲ್ಲಿ ಬಂದ್ರು ಫ್ಯಾನ್ಸ್ ಮಿಸ್ ಮಾಡಿಕೊಳ್ಳುವುದಿಲ್ಲ. ಇದೀಗ ಅಪ್ಪು ನಿಧನಕ್ಕೂ ಮೊದಲು ನಟಿಸಿದ್ದ ಲಕ್ಕಿ ಮ್ಯಾನ್ ಸಿನಿಮಾ ಇದೇ ಸೆಪ್ಟೆಂಬರ್ 9ರಂದು ತೆರೆಗೆ ಬರ್ತಿದೆ. ಹೀಗಾಗಿ ಪುನೀತ್ ಅಭೀಮಾನಿಗಳು ಈ ದಿನಕ್ಕಾಗಿ ಎದುರು ನೋಡ್ತಿದ್ದಾರೆ. ನಿನ್ನೆ (ಆಗಸ್ಟ್ 23) ಬೆಂಗಳೂರಿನಲ್ಲಿ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್,ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವರಾಜ್ ಕುಮಾರ್, ಸಾಧು ಕೋಕಿಲ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್,ಸಂದೇಶ್ ನಾಗರಾಜ್,ನಟ ಪ್ರಭುದೇವ್,ವಿಜಯ್ ಆಂಟೋನಿ, ರಾಜ್ ಸುಂದರಂ, ಮುಗೂರು ಸುಂದರಂ ಸೇರಿದಂತೆ ಸಾಕಷ್ಟು ಮಂದಿ ಹಾಜರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುದೀಪ್ ವೇದಿಕೆ ಮೇಲೆ ಪುನೀತ್ ಬಗ್ಗೆ ಭಾವುಕ ಮಾತುಗಳನ್ನಾಡಿದರು. ‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಹಾಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದರು. ಸೆಪ್ಟೆಂಬರ್ 9ಕ್ಕೆ ‘ಲಕ್ಕಿಮ್ಯಾನ್’ ಸಿನಿಮಾ ಬಹಳ ದೊಡ್ಡಮಟ್ಟದಲ್ಲಿ ಬಿಡುಗಡೆ ಅಗುತ್ತಿದೆ. ಪ್ರಭುದೇವಾ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ ಈ ಕಾಮಿಡಿ ಫ್ಯಾಂಟಸಿ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ, ಸಂಗೀತಾ ಶೃಂಗೇರಿ ಲೀಡ್‌ ರೋಲ್‌ಗಳಲ್ಲಿ ಮಿಂಚಿದ್ದಾರೆ. ಪುನೀತ್ ರಾಜ್‌ಕುಮಾರ್ ದೇವರಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now