• March 18, 2026

ನಂದಕಿಶೋರ್ ಜೊತೆ ‘ಮಾನ್ ಸ್ಟರ್’ ನಲ್ಲಿ ಕೈ ಜೋಡಿಸಿದ ನಿಖಿಲ್ ಕುಮಾರಸ್ವಾಮಿ

ರೈಡರ್ ಸಿನಿಮಾದ ಬಳಿಕ ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ವಿಧಾನಸಭಾ ಚುನಾವಣೆ ಮುಗಿಯುವ ತನಕ ನಿಖಿಲ್ ಬಣ್ಣದ ಯೋಚನೆ ಮಾಡುವುದಿಲ್ಲ ಎನ್ನಲಾಗಿತ್ತು. ಇದೇ ಕಾರಣಕ್ಕೆ ಯದುವೀರ ಸಿನಿಮಾದ ಶೂಟಿಂಗ್ ನಲ್ಲಿ ನಿಖಿಲ್ ಭಾಗಿಯಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಈ ಮಧ್ಯೆ ನಿಖಿಲ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯದುವೀರ ಸಿನಿಮಾದ ಶೂಟಿಂಗ್ ಫೋಸ್ಟ್ ಪೋನ್ ಮಾಡಲಾಗಿದೆ. ಇದೇ ಕಾರಣಕ್ಕೆ ನಿಖಿಲ್ ಮತ್ತೊಂದು ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ನಿಖಿಲ್ ಮುಂದಿನ ಸಿನಿಮಾಗೆ ನಿರ್ದೇಶಕ ನಂದಕಿಶೋರ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗ್ಲೆ ನಂದಕಿಶೋರ್ ಕಥೆ ಹೇಳಿದ್ದು ಚಿತ್ರದಲ್ಲಿ ನಟಿಸಲು ನಿಖಿಲ್ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ರಾಣಾ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಮಾಡಿರೋ ನಿರ್ದೇಶಕ ನಂದಕಿಶೋರ್ ನಿಖಿಲ್ ನಟನೆಯ ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸವನ್ನು ಕಂಪ್ಲೀಟ್ ಮಾಡಿದ್ದಾರೆ. ಚಿತ್ರಕ್ಕೆ ಮಾನ್ ಸ್ಟರ್ ಎಂದು ಹೆಸರಿಡಲಾಗಿದ್ದು ಸದ್ಯದಲ್ಲೇ ಶೂಟಿಂಗ್ ಆರಂಭವಾಗಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now