ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ
ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಭಾನುವಾರ ಮುರುಘಾ ಮಠಕ್ಕೆ ಆರೋಪಿ ಶಿವಮೂರ್ತಿ ಸ್ವಾಮೀಜಿಯನ್ನು ಪೊಲೀಸರು ಕರೆತಂದಿದ್ದರು. ಈ ವೇಳೆ ಪೊಲೀಸರು ಶಿವಮೂರ್ತಿ ಸ್ವಾಮೀಜಿ ಅವರ ಬೆಡ್ರೂಂ, ಬಾತ್ರೂಂ, ಕೊಠಡಿ ಮಹಜರು ಮಾಡಲಾಗಿತ್ತು. ಸಂತ್ರಸ್ತ ಬಾಲಕಿಯರು ತಮ್ಮ ಹೇಳಿಕೆಯಲ್ಲಿ ನೀಡಲಾದ ಎಲ್ಲಾ ಸ್ಥಳಗಳ ಪರಿಶೀಲನೆ ನಡೆಸಿದರು. ಕೃತ್ಯಕ್ಕೆ ಸಂಬಂಧಿಸಿದ ಕೆಲ ಸಾಕ್ಷ್ಯಗಳ ಸಂಗ್ರಹ ಮಾಡಿರುವ ಮಾಹಿತಿ ಲಭ್ಯವಾಗಿದ್ದು, ಮಠದ ಸಿಬ್ಬಂದಿಯಿಂದ ಕೆಲ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ.
ಈ ವೇಳೆ ಮಠದಲ್ಲಿ ಮುರುಘಾ ಶ್ರೀಗಳನ್ನು ನೋಡಿದ ಸಿಬ್ಬಂದಿ ಒಂದು ಕ್ಷಣ ಭಾವುಕರಾದರಂತೆ, ಇತ್ತ ಮಠದಲ್ಲಿಯ ಸಿಬ್ಬಂದಿಯನ್ನು ಕಂಡು ಮುರುಘಾ ಶ್ರೀಗಳು ಕೂಡ ಭಾವುಕರಾದರು. ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಮೂರನೇ ಆರೋಪಿ ಬಸವಾದಿತ್ಯ ಸ್ವಾಮಿಯನ್ನು ಭಾನುವಾರ ಹೊಸಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇಂದು ಕೋರ್ಟ್ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ.
