ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಓಮಿನಿ’ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಟ್ರೇಲರ್ ಲಾಂಚ್ ಮಾಡಿದ ಬಳಿಕ ಮಾತನಾಡಿದ ಗೃಹ ಸಚಿವರ, ‘ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಯು.ಆರ್. ಅನಂತಮೂರ್ತಿ, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ ‘ಓಮಿನಿ’ ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು. ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದುವರೆಗೂ ಕೆಲ ಧಾರವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಸಿದ್ದು ಮೂಲಿಮನಿ ಈ ಸಿನಿಮಾದ ಮೂಲಕ ಹಿರೋ ಆಗಿ ಬಿಗ್ ಸ್ಕ್ರೀನ್ ಗೆ ಎಂಟ್ರಿಕೊಡ್ಡಿದ್ದಾರೆ. ಸಿದ್ದು ಮೂಲಿಮನಿಗೆ ಜೋಡಿಯಾಗಿ ಅಶ್ವಿನಿ ಚಂದ್ರಶೇಖರ್ ಬಣ್ಣ ಹಚ್ಚಿದ್ದಾರೆ. ಶ್ರೀ ಬೆಳ್ಳಡಿ ಫಿಲಂಸ್ ಹಾಗೂ ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಓಮಿನಿ ಸಿನಿಮಾ ಆಗಸ್ಟ್ 19ರಂದು ತೆರೆಗೆ ಬರ್ತಿದೆ.
