• February 10, 2026

ಅಪ್ಪು ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಕೊನೆಗೆ ಕೈ ಮುಗಿದು ಕ್ಷಮೆ ಯಾಚಿಸಿದ ಕಿಡಿಗೇಡಿ

ಪವರ್​​ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು  ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದರು.       ಲಿಂಗದೇವರು ಕೊಪ್ಪಲಿನಲ್ಲಿರುವುದು ಪುಟ್ಟ ಎಂಬ ವ್ಯಕ್ತಿ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ್ದ. ವಿಡಿಯೋ ನೋಡಿ ಗರಂ ಆದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು. ಪುಟ್ಟನ ಮನೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೆ ಆತನ ಮನೆ ಮುಂದೆ ಧರಣಿ ನಡೆಸಿ ಆತನ ವಿರುದ್ಧ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ನಗರದ ಹೊರಹೊಲಯದ ಬೆಳವಾಡಿ ಗ್ರಾಮದ ಹೆದ್ದಾರಿಯಲ್ಲಿ ಪುನೀತ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು, ಅವಹೇಳನಕಾರಿಯಾಗಿ ಮಾತನಾಡಿದವನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ರಸ್ತೆ ತಡೆ ಕೂಡ ನಡೆಸಿದ್ದು, ಪುನೀತ್ ಫೋಟೋ ರಸ್ತೆ ಮಧ್ಯೆ ಇರಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಭಯಗೊಂಡ ವ್ಯಕ್ತಿ ಬಳಿಕ ಎಲ್ಲರ ಎದುರು ಕೈ ಮುಗಿದು ಕ್ಷಮೆ ಯಾಚಿಸಿದ್ದಾನೆ. ಘಟನೆಯಿಂದ ತನ್ನ ತಂದೆ ತಾಯಿ ಸಾಕಷ್ಟು ಭಯಗೊಂಡಿದ್ದಾರೆ. ಮುಂದೆಂದೂ ಯಾವ ನಟನ ಕುರಿತಾಗಿಯೂ ಈ ರೀತಿ ಮಾತನಾಡುವುದಿಲ್ಲ. ಇದೊಂದು ಬಾರಿ ಕ್ಷಮಿಸಿ ಎಂದು ಬೇಡಿಕೊಂಡಿದ್ದಾನೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now