ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಹಿಳಾ ಪ್ರಧಾನ ಕಥೆಯೊಳಗೊಂಡಿರುವ ಪರಿಶುದ್ಧಂ ಹಾಡುಗಳ ಬಿಡುಗಡೆ
ನಿರ್ದೇಶರು ವೇಗವಾಗಿ ಕಥೆ ಹೇಳಿದಾಗ ಮತ್ತೋಮ್ಮೆ ಹೇಳಿ ಅಂತ ಕೋರಿಕೊಂಡೆ. ಇಂತಹ ಪಾತ್ರ ಮಾಡೋಕೆ ನನ್ನಿಂದ ಆಗುತ್ತಾ ಎಂಬ ಗೊಂದಲದಲ್ಲಿದ್ದೆ. ಆದರೂ ಧೈರ್ಯದಿಂದ ಮಾಡಿದೆ. ಇಂತಹ ಅವಕಾಶವನ್ನು ನೀಡಿದ್ದಕ್ಕೆ ಥ್ಯಾಂಕ್ಸ್. ಪ್ರತಿಯೊಂದು ಫ್ರೇಮ್ ಚೆನ್ನಾಗಿ ಬಂದಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕಾದರೆ, ಬೇರೆ ಭಾಷೆಯಲ್ಲಿ ಸುತ್ತಾಡಿಕೊಂಡು ಬಂದರೆ ಮಾತ್ರ ಇಲ್ಲಿ ಸ್ವಾಗತ ಸಿಗುತ್ತದೆ. ಅದು ಈಗ ಬದಲಾವಣೆಯಾಗುತ್ತಿದೆ ಎಂದು ಸ್ವಶಾರೇಖಾ ಅಭಿಪ್ರಾಯಪಟ್ಟರು.
’ಅಮೃತಘಳಿಗೆ’ ಸಿನಿಮಾದ ಮೂಲಕ ಕಾರ್ತಿಕ್ವೆಂಕಟೇಶ್ ಪರಿಚಯವಾಗಿದ್ದು, ಇದರಲ್ಲಿ ನಟಿಯಾಗಿ ಕಾಣಿಸಿಕೊಂಡು ಒಂದು ಹಾಡಿನಲ್ಲಿ ಬರುತ್ತೇನಂದು ನೀತು ಹೇಳಿದರು. ರೋಹನ್ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್ರಾಥೋಡ್ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ.
ಮತ್ತೋಂದು ಮುಖ್ಯ ಪಾತ್ರದಲ್ಲಿ ನಟಿಸಿರುವ ದಿಶಾಪೂವಯ್ಯ ಗೈರುಹಾಜರಿದ್ದರು. ಉಳಿದಂತೆ ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರುರಮಾನಂದ್, ರಾಜ್ಚರಣ್, ದುಬೈರಫೀಕ್, ಎಂ.ಡಿ.ಕೌಶಿಕ್ ಪಾತ್ರದ ಪರಿಚಯ ಮಾಡಿಕೊಂಡರು.
