• June 2, 2026

Prashanth Neel Promotes KGF Chapter 2 In Chennai

ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. 75ನೇ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಹುಟ್ಟೂರಾದ ನೀಲಕಂಠಪುರಂ ಎಂಬ ಹಳ್ಳಿಗೆ ಭೇಟಿ ನೀಡಿದ ಪ್ರಶಾಂತ್ ನೀಲ್ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಎಲ್‌ ವಿ ಪ್ರಸಾದ್ ಐ ಹಾಸ್ಟಿಟಲ್‌ ಗೆ ಸುಮಾರು 50ಲಕ್ಷ ರೂ. ಹಣವನ್ನು ದೇಣಿಯಾಗಿ ನೀಡಿದ್ದಾರೆ. ಈ ಬಗ್ಗೆ ಪ್ರಶಾಂತ್ ನೀಲ್ ಸಂಬಂಧಿ ಡಾ.ಎನ್‌ ರಘುವೀರ ರೆಡ್ಡಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಪ್ರಶಾಂತ್ ನೀಲ್ ತಂದೆ ಶುಭಾಷ್ ಹುಟ್ಟಿದ್ದೂ ಆಗಸ್ಟ್ 15, 1947. ಅಂದೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನ. ಈ ಕಾರಣಕ್ಕೆ ಈ ದಿನ ತುಂಬಾನೇ ಸ್ಪೆಷಲ್ ಆಗಿದ್ದು ಇದೇ ಸಂದರ್ಭದಲ್ಲಿ ದೇವಸ್ಥಾನಕ್ಕೆ ಹಣ ದೇಣಿಗೆ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now