ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಕೈ ಹಿಡಿದ ನಟಿ, ನಿರೂಪಕಿ ಮಹಾಲಕ್ಷ್ಮೀ
ಇವರಿಬ್ಬರಿಗೂ ಇದು ಎರಡನೇ ಮದುವೆ. ಮಹಾಲಕ್ಷ್ಮೀ ನಿರೂಪಣೆಯ ಜೊತೆಗೆ ನಟಿಯಾಗಿಯೂ ಹೆಸರು ಮಾಡಿದ್ದರು. ರವೀಂದರ್ ಚಂದ್ರಶೇಖರ್ ನಿರ್ಮಿಸಿದ್ದ ‘ವಿಡಿಯುಮ್ ವಾರೈ ಕಾಥಿರು’ ಸಿನಿಮಾದಲ್ಲಿ ಮಹಾಲಕ್ಷ್ಮೀ ನಟಿಸಿದ್ದರು. ಆ ಸಿನಿಮಾದಲ್ಲಿ ವಿದಾರ್ಥ್ ಮತ್ತು ವಿಕ್ರಾಂತ್ ಮುಖ್ಯಭೂಮಿಕೆಯಲ್ಲಿದ್ದರು.
ಧಾರಾವಾಹಿ ಕ್ಷೇತ್ರದಲ್ಲೂ ಮಹಾಲಕ್ಷ್ಮೀ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ಮಹಾಲಕ್ಷ್ಮೀ ನಟಿಸಿದ್ದಾರೆ. ಸದ್ಯ ಮಹಾಲಕ್ಷ್ಮೀ ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ.
ರವೀಂದರ್ ಚಂದ್ರಶೇಖರನ್ ತಮ್ಮದೆ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ `ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ನವ ಜೋಡಿಗಳು ತಮ್ಮ ಮದುವೆಯ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರೊಂದಿಗೆ ಮಹಾಲಕ್ಷ್ಮೀ ಅವರು, ‘ನಿಮ್ಮನ್ನು ನನ್ನ ಬದುಕಿನಲ್ಲಿ ಪಡೆಯಲು ನಾನು ತುಂಬ ಅದೃಷ್ಟ ಮಾಡಿದ್ದೇನೆ. ಬೆಚ್ಚನೆಯ ಪ್ರೀತಿಯಿಂದ ನೀವು ನನ್ನ ಬದುಕನ್ನು ಪರಿಪೂರ್ಣಗೊಳಿಸಿದ್ದೀರಿ. ಲವ್ ಯೂ ಅಮ್ಮು..’ ಎಂದು ಬರೆದುಕೊಂಡಿದ್ದಾರೆ.
