• March 20, 2026

ಪುನೀತ್ ಜನ್ಮದಿನ ಇನ್ನು ಮುಂದೆ ‘ಸ್ಫೂರ್ತಿ ದಿನ’: ಸ್ಪೂರ್ತಿಯ ಚಿಲುಮೆಗೆ ಸರ್ಕಾರದಿಂದ ವಿಶೇಷ ಗೌರವ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ಸಿನಿಮಾದ ಜೊತೆಗೆ ಅನೇಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಅಪ್ಪು ಅದೆಷ್ಟೋ ಜನರಿಗೆ ಸ್ಪೂರ್ತಿ. ಇದೀಗ ಪುನೀತ್ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸುತ್ತಿದೆ. ಯಾವತ್ತು ಹಣದ ಮುಖ ನೋಡದೇ ಕೇವಲ ಉತ್ತಮ ಪಾತ್ರಗಳ ಮೂಲಕವೇ ಪ್ರೇಕ್ಷಕರಿಗೆ ಮುಂದೆ ಬರುತ್ತಿದ್ದ ಪುನೀತ್ ರಾಜ್ ಕುಮಾರ್ ನಿರ್ಮಾಪಕರಾಗಿಯೂ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದರು. ಅಲ್ಲದೆ ನೂರಾರು ಮಕ್ಕಳಿಗೆ ಆಸರೆ ನೀಡಿದ್ದರು. ಜೊತೆಗೆ ಅದೆಷ್ಟೋ ಮಂದಿಗೆ ತಮ್ಮ ಕೈಲಾದ ಸಹಾಯ ಮಾಡಿದ್ದ ಪುನೀತ್ ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದ್ದರು. ಇದೇ ಕಾರಣದಿಂದ ಸರ್ಕಾರ ಪುನೀತ್ ಅವರಿಗೆ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಈ ಬಗ್ಗೆ ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ’ ಎಂದಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now