ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ರಾಜ್ ಕುಮಾರ್ ಕುರಿತು ಭಾವುಕ ಪತ್ರ ಬರೆದ ಅಶ್ವಿನಿ
ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಅಶ್ವಿನಿ ಬರೆದುಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಪರಿಗಣಿಸಿ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಜೂನಿಯರ್ ಎನ್ ಟಿ ಆರ್ ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ.
