• February 10, 2026

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಅಂದು ಅಪ್ಪ, ಇಂದು ಅಪ್ಪು ಎಂದ ರಾಘಣ್ಣ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಪ್ಪು ಅವರಿಗೆ ಮರಣೊತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅಪ್ಪು ಪತ್ನಿ ಅಶ್ವಿನಿ ಸ್ವೀಕರಿಸಿದ್ದಾರೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ನಟ ರಾಘವೇಂದ್ರ ರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು. ನಮ್ಮ ತಂದೆ ಕರ್ನಾಟಕ ರತ್ನ ಪಡೆದುಕೊಳ್ಳುವಾಗ 30 ವರ್ಷದ ಹಿಂದೆ ನಮ್ಮನ್ನು ಕರೆದುಕೊಂಡು ಬಂದಿದ್ದರು. ಈಗ ನನ್ನ ತಮ್ಮ ಅಪ್ಪು ಕರೆಸಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಶಕ್ತಿ ಇರುತ್ತದೆ ಎಂದರು ರಾಘಣ್ಣ ಹೇಳಿದರು. `ಗಂಧದಗುಡಿ’ ಯಾಕೆ ಆ ಚಿತ್ರ ಮಾಡಿದ ಪ್ರಾಣಿ ಕಾಡಿನ ಬಗ್ಗೆ ಅವನಿಗಿದ್ದ ಕಾಳಜಿ, ಪ್ಲಾಸ್ಟಿಕ್ ಬಳಸಬೇಡಿ ಎಂಬ ಸಂದೇಶವಿತ್ತು. ಚಿಕ್ಕ ಮಕ್ಕಳಿಗೂ ಅದನ್ನ ಕಲಿಸಬೇಕು ಅದು ನಿಜವಾದ ಅವಾರ್ಡ್ ಎಂದು ರಾಘಣ್ಣ ಮಾತನಾಡಿದ್ದಾರೆ. ಅಭಿಮಾನಿ ದೇವರುಗಳು ಮಳೆಯಲ್ಲಿ ನಿಂತು ಕಾರ್ಯಕ್ರಮ ನೋಡಿದ್ದೀರ ನಿಮಗೆ ನನ್ನ ಸಾಷ್ಟಾಂಗ ನಮಸ್ಕಾರಗಳು ಎಂದು ರಾಘಣ್ಣ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದರು. ಪುನೀತ್ ರಾಜ್ ಕುಮಾರ್ ಅವರ ಕಲಾ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗು  ನಟ ಜೂನಿಯರ್ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸಿ ಅಪ್ಪು ಅವರ ಕುರಿತು ಮಾತನಾಡಿದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now