• March 15, 2026

‘ರಾಜಕುಮಾರ’ನಿಗೆ ಕರ್ನಾಟಕ ರತ್ನ ಪ್ರದಾನ ಮಾಡಲಿದ್ದಾರೆ ಆ ‘ಸೂಪರ್ ಸ್ಟಾರ್ ‘

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಒಂದು ವರ್ಷಗಳೇ ಆಗುತ್ತಾ ಬಂದಿದೆ. ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರು, ಪ್ರತಿಯೊಬ್ಬರ ಮನೆ, ಮನಗಳಲ್ಲೂ ಅಪ್ಪು ರಾರಾಜಿಸುತ್ತಿದ್ದಾರೆ. ಇದೀಗ ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಸಮಯ ಹತ್ತಿರ ಬಂದಿದ್ದು ಈ ಪ್ರತಿಷ್ಠಿತ ಗೌರವವನ್ನು ಮರಣೋತ್ತರವಾಗಿ ಪುನೀತ್‌ಗೆ ಯಾರು ಸಮರ್ಪಿಸುತ್ತಾರೆ ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸಿನಿಮಾ ಹಾಗೂ ಸಮಾಜಮುಖಿ ಕೆಲಸಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿರೋ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಹೀಗಾಗಿ ಇತ್ತೀಚೆಗೆ ನಡೆದ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ನವೆಂಬರ್ 1ರಂದು ಪ್ರಶಸ್ತ ಪ್ರಧಾನ ಮಾಡುವುದಾಗಿ ಹೇಳಿದ್ದರು. ಇದೀಗ ಆ ಪ್ರಶಸ್ತಿಯನ್ನು ಯಾರು ನೀಡುತ್ತಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವದ ದಿನ ಸಂಜೆ ನಾಲ್ಕು ಗಂಟೆಗೆ ಸರಿಯಾಗಿ ವಿಧಾನಸೌಧದ ಮುಂಭಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಹೆಸರು ಮಾಡಿದ್ದು, ಕನ್ನಡಿಗರೇ ಆದ, ಡಾ.ರಾಜ್ ಕುಮಾರ್ ಕುಟುಂದ ಜೊತೆ ಉತ್ತಮ ಬಾಂದವ್ಯ ಹೊಂದಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎನ್ನಲಾಗುತ್ತಿದೆ. 1992ರಿಂದ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು ಇದುವರೆಗೂ 9 ಮಂದಿ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗಿದೆ. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ನೀಡುತ್ತದೆ. 1992ರಲ್ಲಿ ಡಾ. ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು.ಇದೀಗ ಪುನೀತ್ ರಾಜ್ ಕುಮಾರ್ ಅವರ ಅಸಾಧಾರಣ ಸಾಧನೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now