ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇಂದಿನಿಂದ 3 ದಿನಗಳ ಕಾಲ ರವಿಚಂದ್ರನ್ ಪುತ್ರನ ಮದುವೆ ಸಂಭ್ರಮ
ಅದ್ದೂರಿ ಮದುವೆ ಸಮಾರಂಭಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟಲ್ಸ್ ತ್ರಿಪುರವಾಸಿನಿ ಸಿದ್ಧಗೊಂಡಿದೆ. ಮದುವೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ರಾಜಕೀಯ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ, ಸಿನಿಮಾ ರಂಗದ ಗಣ್ಯರು ಕೂಡ ಭಾಗಿಯಾಗಲಿದ್ದಾರೆ.
ಆಗಸ್ಟ್ 22 ರಂದು ಮನೋರಂಜನ್ ಕಡೆಯಿಂದ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಿನಿಮಾ ರಂಗದ ಗೆಳೆಯರು, ರವಿಚಂದ್ರನ್ ಅವರ ಆಪ್ತರು ಹಾಗೂ ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದ ರವಿಚಂದ್ರನ್, ಮಗನ ಮದುವೆಯನ್ನು ಸರಳವಾಗಿ ಮಾಡುತ್ತಿರುವುದರಿಂದ ಕುಟುಂಬಸ್ಥರಿಗೆ ಮತ್ತು ಆಪ್ತರಿಗಷ್ಟೇ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ.
