ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಪ್ಪು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಉಪೇಂದ್ರ
ಸದ್ಯ ಉಪೇಂದ್ರ ಐಯು ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಗಾಗಿ ಉಪ್ಪಿ ಹೊಸಪೇಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಪ್ಪು ಅವರಿಗೆ ಗೌರವ ಕೊಡುವುದರ ಜೊತೆಗೆ ಅವರ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಹೊಸಪೇಟೆಯ ಡಾ.ಪುನೀತ್ ರಾಜ್ ಕುಮಾರ್ ವೃತ್ತದಲ್ಲಿರುವ ಪುನೀತ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಉಪೇಂದ್ರ ನಮನ ಸಲ್ಲಿಸಿದರು. ಅಪ್ಪು ಅವರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಅಪ್ಪು ಥರ ಬದುಕಬೇಕು. ಅಪ್ಪು ಪುತ್ಥಳಿ ಮಾಡಿದ್ದಾರೆ ಅಂತ, ಹೂವಿನ ಹಾರ ಹಾಕಿ ಮನೆಗೆ ಹೋಗೋದಲ್ಲಾ. ಅವರ ಗುಣಗಳನ್ನು ನೀವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯಾರು ಕೈ ಬಿಟ್ರು ಹೊಸಪೇಟೆ ಜನ ಕೈ ಬಿಡೋಲ್ಲಾ ಅಂತಾ ಅಪ್ಪು ಹೇಳಿದ್ದರು. ಇನ್ನೂ ರಾಜಕೀಯ ಮಾಡಬೇಡಿ, ಪ್ರಜಾಕೀಯ ಮಾಡಿ. ಪಕ್ಷ ನೋಡಿ ಓಟ್ ಹಾಕಬೇಡಿ, ಸಿದ್ದಾಂತ ನೋಡಿ ಓಟ್ ಹಾಕಿ ಎಂದು ಅಭಿಮಾನಿಗಳಿಗೆ ಉಪೇಂದ್ರ ಹೇಳಿದ್ದಾರೆ.
