ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಚಿತ್ರೀಕರಣಕ್ಕೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ: ಅಷ್ಟಕ್ಕೂ ಧರ್ಮಾಧಿಕಾರಿಗಳು ಏನ್ ಹೇಳಿದ್ರು ಗೊತ್ತಾ?
ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಪಾತ್ರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕೆ ಯಾವುದೇ ಲೋಪ ಬರಬಾರದು ಎಂಬ ಕಾರಣಕ್ಕೆ ಮಂಗಳೂರಿನ ಸುತ್ತಮುತ್ತಲಿನ ದೈವ ನರ್ತಕರು, ದೈವಾರದಕರನ್ನು ಕೇಳಿ ಅದರ ಬಗ್ಗೆ ತಿಳಿದುಕೊಂಡಿದ್ದಾರೆ.
ಈ ವೇಳೆ ದೈವ ನರ್ತಕರು ಧರ್ಮಸ್ಥಳದ ಮಂಜುನಾಥನ ಆಶೀರ್ವಾದ ಪಡೆಯಲು ತಿಳಿಸಿದ್ದಾರೆ. ಇದರ ಮೂಲ ದೇವರು ಧರ್ಮಸ್ಥಳದಲ್ಲಿದ್ದ ಕಾರಣ ಅಲ್ಲಿಗೆ ತೆರಳಲು ಸೂಚಿಸಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದೇವರ ಆಶೀರ್ವಾದ ಪಡೆದು ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ.
ವೀರೇಂದ್ರ ಹೆಗ್ಗಡೆ ಅವರ ಬಳಿಕ ಕಾಂತಾರ ಸಿನಿಮಾದ ಬಗ್ಗೆ ಹೇಳಿ ಯಾವ ರೀತಿ ನಡೆದುಕೊಳ್ಳಬೇಕು ಎಂದು ಕೇಳಿದ್ದಾರೆ. ಈ ವೇಳೆ ಪ್ರತಿಕ್ರಿಯಿಸದ ಹೆಗ್ಗಡೆ ಅವರ ಏನೂ ಆಗಲ್ಲ, ಇಲ್ಲಿಗೆ ಬಂದಿದ್ದೀಯಲ್ಲ ಒಳ್ಳೆಯದಾಗುತ್ತೆ ಹೋಗು ಎಂದಿದ್ದರಂತೆ.
