ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮುಂಬೈನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ
ಪ್ರೈವೇಟ್ ಜೆಟ್ ಮೂಲಕ ಅವರು ಎಲ್ಲಾ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗ್ತಿದೆ. ಅವರ ಫೋಟೋಗಳು ವೈರಲ್ ಆಗಿವೆ. ಸದ್ಯ ರಿಷಬ್ ಶೆಟ್ಟಿ ಮುಂಬೈನಲ್ಲಿ ಬೀಡು ಬಿಟ್ಟಿದ್ದು, ಅಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಮಾನಿಗಳು ರಿಷಬ್ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿ ಬಿದ್ದಿದ್ದಾರೆ.
‘ಕಾಂತಾರ’ ಸಿನಿಮಾ 300 ಕೋಟಿ ಗಳಿಕೆಯತ್ತ ಮುಖ ಮಾಡುವ ಮೂಲಕ ಕನ್ನಡದ್ದೇ ಮತ್ತೊಂದು ಸಿನಿಮಾ ‘ಕೆಜಿಎಫ್ 2’ ಚಿತ್ರದ ದಾಖಲೆಯನ್ನು ಮುರಿಯಲು ಸಜ್ಜಾಗಿದೆ. ಈಗಾಗಲೇ ಕರ್ನಾಟಕ, ಹೊರ ರಾಜ್ಯಗಳು ಹಾಗೂ ವಿದೇಶಗಳು ಸೇರಿದಂತೆ ವಿಶ್ವಾದ್ಯಂತ ಒಟ್ಟಾರೆ 250 ಕೋಟಿ ಗಳಿಕೆ ಮಾಡಿದ್ದು, ಈ ಪೈಕಿ ಕರ್ನಾಟಕ ಹಾಗೂ ಹೊರ ರಾಜ್ಯಗಳಲ್ಲಿ 200 ಕೋಟಿ ಗಳಿಸಿದೆ.
