ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಾಗಚೈತನ್ಯ ಮೇಲೆ ಸಮಂತಾಗೆ ಕೊಲ್ಲುವಷ್ಟು ಕೋಪವಿದೆಯಾ?
ನಿಮ್ಮನ್ನು ಹಾಗೂ ನಾಗಚೈತನ್ಯರನ್ನು ಒಂದೇ ರೂಮಿನಲ್ಲಿ ಬಿಟ್ಟರೆ ಅಲ್ಲಿ ಚೂಪದ ವಸ್ತುವನ್ನು ಇಡಬಹುದೇ ಎಂದು ಕರಣ್ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಸಮಂತಾ, ನನ್ನನ್ನು ಮತ್ತು ನಾಗಚೈತನ್ಯ ಅವರನ್ನು ಒಂದೇ ಕೊಠಡಿಗೆ ಹಾಕಿದರೆ, ಆ ಕೋಣೆಯಲ್ಲಿ ಚೂಪಾದ ವಸ್ತುಗಳನ್ನು ಇರದಂತೆ ನೋಡಿಕೊಳ್ಳಿ ಎಂದಿದ್ದಾರೆ.
ಇದೇ ವೇಳೆ ಮತ್ತೊಂದು ಪ್ರಶ್ನೆ ಕೇಳಿದ ಕರಣ್, ನಿಮ್ಮನ್ನು ಸಾಕಷ್ಟು ನೋಯಿಸಿದ ಸೋಷಿಯಲ್ ಮೀಡಿಯಾ ಟ್ರೋಲಿಂಗ್ ಯಾವುದು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಮಂತಾ, ನಾಗ ಚೈತನ್ಯಗೆ ವಿಚ್ಛೇದನ ನೀಡಲು 250 ಕೋಟಿ ರೂಪಾಯಿ ತೆಗೆದುಕೊಂಡಿರುವ ಸುದ್ದಿ ನನಗೆ ತುಂಬಾ ನೋವುಂಟು ಮಾಡಿದೆ ಎಂದಿದ್ದಾರೆ. ಡಿವೋರ್ಸ್ ಅನೌನ್ಸ್ ಮಾಡಿದಾಗ ಕಷ್ಟ ಆಯ್ತು. ನಾವು ಖುಷಿಯಿಂದ ಡಿವೋರ್ಸ್ ಪಡೆದುಕೊಂಡಿಲ್ಲ. ಸಾಕಷ್ಟು ನೋವಿನಿಂದಲೇ ದೂರ ಆಗಿದ್ದೇವೆ ಎಂದು ಸಮಂತಾ ಹೇಳಿದ್ದಾರೆ.
