• June 15, 2026

ಮುರುಘಾ ಮಠದ ನೂತನ ಪೀಠಾಧಿಪತಿಗೆ ಹೆಚ್ಚಿದ ಒತ್ತಡ: ಶ್ರೀಗಳ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಕಾಯಿದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಬದಲಿಗೆ ನೂತನ ಸ್ವಾಮೀಜಿಯನ್ನು ನೇಮಕ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವ ಕಾರಣ ದೈನಂದಿನ ಧಾರ್ಮಿಕ ಕಾರ್ಯಗಳು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗಲು ಕಷ್ಟವಾಗುತ್ತಿದೆ. ಹೀಗಾಗಿ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಕೆಲ ಲಿಂಗಾಯತ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು, ಮಠಕ್ಕೆ ನೂತನ ಪೀಠಾಧಿಪತಿಗಳನ್ನು ನೇಮಿಸಬೇಕು. ಅಲ್ಲದೆ ಕಳಂಕಿತ ಮುರುಘಾ ಸ್ವಾಮೀಜಿಯ ಬೆನ್ನಿಗೆ ನಿಂತಿರುವವರನ್ನು ಮಠದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಇದಕ್ಕೆ ಅಗತ್ಯ ಬಿದ್ದರೆ ಕಾನೂನು ಹೋರಾಟ ಮಾಡುವ ನಿರ್ಣಯ ಕೈಗೊಂಡಿದ್ದಾರೆ.  ಲಿಂಗಾಯತ ಮುಖಂಡರ ಮಾತಿನಿಂದ ಸ್ವಾಮೀಜಿ ಮತ್ತು ಎಸ್‍ಕೆ ಬಸವರಾಜನ್ ಬೆಂಬಲಿಗರು ಆಕ್ರೋಶಗೊಂಡ ಗದ್ದಲ ಎಬ್ಬಿಸಿದ್ದಾರೆ.  ಸದ್ಯ ಜೈಲಿನಲ್ಲಿರುವ ಶ್ರೀಗಳು ಚೆಕ್ ಗಳಿಗೆ ಸಹಿ ಹಾಕಲು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಇದಕ್ಕೆ ಹೈಕೋರ್ಟ್ ಸಮ್ಮತಿ ನೀಡಿಲ್ಲ. ಅಲ್ಲದೆ ಚೆಕ್ ಗಳು ಶ್ರೀಗಳ ಹೆಸರಿನಲ್ಲೇಕಿದೆ?ಸಂಸ್ಥೆ ಹೆಸರಿನಲ್ಲಿ ಯಾಕಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ಸಮರ್ಪಕ ಮಾಹಿತಿಯುಳ್ಳ ಮೆಮೋ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now