ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಸಿನಿಮಾವನ್ನು ನೇರವಾಗಿ ಆಸ್ಕರ್ ಗೆ ಕಳುಹಿಸಿ: ನಟಿ ಕಂಗಾನ ರಣಾವತ್
ಕಳೆದ ಎರಡು ದಿನಗಳ ಹಿಂದಷ್ಟೇ ಕಾಂತಾರ ಚಿತ್ರ ವೀಕ್ಷಿಸಿದ್ದ ಕಂಗಾನ ಚಿತ್ರದ ಕುರಿತು ಮೆಚ್ಚುಗೆಯ ಮಾತನಾಡಿದ್ದರು. ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ನಾನೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು ನೋಡಿದ ತೃಪ್ತಿ ಇದೆ. ಈ ಅನುಭವದಿಂದ ಆಚೆ ಬರಲು ನನಗೆ ಒಂದು ವಾರವಾದರೂ ಬೇಕು. ಆ ರೀತಿಯಲ್ಲಿ ಕಾಂತಾರ ಸಿನಿಮಾ ಮೂಡಿ ಬಂದಿದೆ ಎಂದಿದ್ದರು.
ಈಗಾಗ್ಲೆ ಕಾಂತಾರ ಸಿನಿಮಾಗೆ ಸಾಕಷ್ಟು ಮಂದಿ ಮೆಚ್ಚುಗೆ ಸೂಚಿಸಿದ್ದಾರೆ. ನಟ ಪ್ರಭಾಸ್, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಕಂಗಾನ ರಣಾವತ್ ಸೇರಿದಂತೆ ಪರಭಾಷೆಯ ಕಲಾವಿದರು ಜೈ ಅಂದಿದ್ದರು. ಇದೀಗ ಕಂಗನಾ ಕಾಂತಾರವನ್ನು ಆಸ್ಕರ್ ಗೆ ಕಳುಹಿಸಲು ಮನವಿ ಮಾಡಿದ್ದಾರೆ.
