ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹರೀಶ್ ರಾಜ್ ಸಿನಿ ಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ
ಬಿಗ್ ಬಾಸ್ ನನಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದೆ. ನಾನು ಏನಾದರೂ ಈ ರಂಗದಲ್ಲಿ ಸಾಧನೆ ಮಾಡಿದ್ದೀನಿ ಅಂದರೆ ಅದಕ್ಕೆ ಕಾರಣ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಹಾಗೂ ಮಾಧ್ಯಮದವರು. ಇಡೀ ಚಿತ್ರರಂಗಕ್ಕೆ ನಾನು ಚಿರ ಋಣಿ ಎಂದರು ಹರೀಶ್ ರಾಜ್.
ಸ್ನೇಹಿತರೊಬ್ಬರ ಮೂಲಕ ನನಗೆ ಹರೀಶ್ ರಾಜ್ ಪರಿಚಯವಾದರು. ರಬಕವಿಯಲ್ಲಿ “ತಾಯಿಸಾಹೇಬ” ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಜಯಮಾಲ, ಶಿವರಾಮಣ್ಣ ಭಾಗವಹಿಸಿದ್ದರು. ತುರ್ತುಕಾರ್ಯದ ನಿಮಿತ್ತ ಶಿವರಾಮಣ್ಣ ಬೆಂಗಳೂರಿಗೆ ತೆರಳಬೇಕಾಯಿತು. ಆಗ ತಕ್ಷಣ ಹರೀಶ್ ರಾಜ್ ಅವರಿಗೆ ಫೋನ್ ಮಾಡಿ, ನಾಳೆ ನಿಮ್ಮ ಪಾತ್ರದ ಚಿತ್ರೀಕರಣವಿದೆ. ರಾತ್ರಿಯೇ ಹೊರಟು ಬನ್ನಿ ಎಂದೆ. ಬೆಳಗ್ಗೆ ಬಂದರು. ಯಾವುದೇ ಆಯಾಸವಿಲ್ಲದೆ ಅಂದಿನ ಚಿತ್ರೀಕರಣದಲ್ಲಿ ಲವಲವಿಕೆಯಿಂದ ಭಾಗವಹಿಸಿ, ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ “ದ್ವೀಪ” ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಇವರು ರಾಷ್ಟ್ರೀಯ ಪ್ರಶಸ್ತಿ ರೇಸ್ ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟನಲ್ಲಿ ಹರೀಶ್ ರಾಜ್ ಉತ್ತಮ ನಟ. ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ ಎಂದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾರೈಸಿದರು.
ತಮ್ಮ ಹರೀಶ್ ರಾಜ್ ಒಡನಾಟದ ಬಗ್ಗೆ ಸುನೀಲ್ ಪುರಾಣಿಕ್ ನೆನಪಿಸಿಕೊಂಡರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಶುಭಾಶಯ ತಿಳಿಸಿದರು.
