ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗಲಿ: ಸಿಎಂಗೆ ನಟ ಝೈದ್ ಖಾನ್ ಮನವಿ
ಇದೇ ವೇಳೆ ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ಬನಾರಸ್ ನ್ನು ಬೈಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.
