• December 22, 2025

ಟ್ರಾಫಿಕ್ ನಲ್ಲೇ ಕಾರು ಬಿಟ್ಟು 3 ಕಿಲೋ ಮೀಟರ್ ಓಡಿ ರೋಗಿಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ಡಾಕ್ಟರ್

ಬೆಂಗಳೂರಿನ ಟ್ರಾಫಿಕ್ ನಲ್ಲಿ ಮಣಿಪಾ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ತಜ್ಷ ಡಾ.ಗೋವಿಂದ ನಂದ ಕುಮಾರ್ ಅವರ ಕಾರು ಸಿಲುಕಿಕೊಂಡಿದರೆ. ಅತ್ತ ರೋಗಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಡಾಕ್ಟರ್ ರ ಬರುವಿಕೆಗಾಗಿ ಕಾದು ಕುಳಿತಿದ್ದರು. ಹೀಗಾಗಿ ತಕ್ಷಣವೇ ಹಿಂದೂ ಮುಂದು ನೋಡದ ಡಾ.ಗೋವಿಂದ ಟಾಫಿಕ್ ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಲ್ಲಿಯೇ ಬಿಟ್ಟು ಬರೋಬ್ಬರಿ 3 ಕಿಲೋ ಮೀಟರ್ ಓಡಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆ ತಲುಪಿದ ವೈದ್ಯರು ಕೊಂಚವು ವಿಶ್ರಮಿಸಿಕೊಳ್ಳದೆ ತಮ್ಮ ಸಿಬ್ಬಂದಿಯೊಂದಿಗೆ ಸೇರಿ ಯಶಸ್ವಿಯಾಗಿ ಅಪರೇಷನ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಆಗಸ್ಟ್ 30 ರಂದು ರೋಗಿಯೊಬ್ಬರಿಗೆ ಲ್ಯಾಪ್ರೋ ಸ್ಕೋಪಿಕ್ ಗ್ಲಾಡ್ ಬ್ಲಡರ್ ಚಿಕಿತ್ಸೆ ಮಾಡಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಡಾ. ಗೋವಿಂದ ನಂದಕುಮಾರ್ ಕನ್ನಿಂಗ್ ಹ್ಯಾಮ್‍ನಿಂದ ಸರ್ಜಾಪುರದ ಮಣಿಪಾಲ್ ಆಸ್ಪತ್ರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಆದರೆ ಅಂದು ವಿಪರೀತ ಮಳೆಯಾದ ಪರಿಣಾಮ ಮಾರತಹಳ್ಳಿ ಮತ್ತು ಸರ್ಜಾಪುರದ ರಸ್ತೆ ಕಂಪ್ಲೀಟ್ ಜಾಮ್ ಆಗಿತ್ತು. ಬೆಳ್ಳಗ್ಗೆ 10 ಗಂಟೆಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿತ್ತು. ಟ್ರಾಫಿಕ್ ಇದ್ದ ಪರಿಣಾಮ ಆಸ್ಪತ್ರೆ ತಲುಪಲು 1 ಗಂಟೆ ಸಮಯ ಇಡಿಯುತ್ತಿತ್ತು. ಹೀಗಾಗಿ ವೈದ್ಯರು ಕಾರನ್ನು ಆಸ್ಪತ್ರೆಗೆ ತರುವಂತೆ ಕಾರು ಚಾಲಕನಿಗೆ ಹೇಳಿ 3 ಕಿ.ಮೀ ಓಡಿಹೋಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ವೈದ್ಯರು ಎಂದರೆ ದುಡ್ಡು ತಿನ್ನಲೆ ಇರುವವರು ಎನ್ನವವರ ಮಧ್ಯೆ ಡಾ.ಗೋವಿಂದ ನಂದ ಕುಮಾರ್ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ವೈದ್ಯೋ ನಾರಾಯಣ ಹರಿ ಎಂಬ ಮಾತನ್ನು ನಿಜ ಮಾಡಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಗೋವಿಂದರಾಜು ಕೆಲಸವನ್ನು ಮೆಚ್ಚಿಕೊಂಡಿದ್ದು ಹ್ಯಾಟ್ಸ್ ಹೇಳುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now