• January 1, 2026

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ ರಾಜ್ ಕುಮಾರ್ ಕುರಿತು ಮೆಚ್ಚುಗೆ ಸೂಚಿಸಿದರು. ‘ಕನ್ನಡದಲ್ಲಿ ಇಂಥದ್ದೊಂದು ಸಿನಿಮಾ ಬಂದಿರುವುದು ನೋಡಿ ಗರ್ವ ಬಂತು. ಅವರ ಈ ಪ್ರಯತ್ನಕ್ಕೆ ಫುಲ್ ಮಾರ್ಕ್ಸ್ ಕೊಡುತ್ತೇನೆ’. ಈ ಗಂಧದ ಗುಡಿಯಲ್ಲಿ ಯುವಕರು ನೋಡಿ ತಿಳಿದುಕೊಳ್ಳಬಹುದಾದ ಸಾಕಷ್ಟು ವಿಷಯಗಳು ಇವೆ. ಅದರಲ್ಲೂ ನನ್ನ ಉತ್ತರ ಕರ್ನಾಟಕದ ಬಗ್ಗೆ ತೋರಿಸಿದಾಗ ಮತ್ತು ಪುನೀತ್ ಅವರು ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ನಾನೂ ಭಾವುಕಳಾದೆ. ನಮ್ಮ ನೆಲದ ಚಿತ್ರ ಇದಾಗಿದ್ದರಿಂದ ಹೆಚ್ಚು ಆಪ್ತತೆ ಅನಿಸಿತು ಎಂದು ಸುಧಾಮೂರ್ತಿ ಹೇಳಿದ್ದಾರೆ. ಇನ್ನೂ ಗಂಧದ ಗುಡಿ ಚಿತ್ರ ಎಲ್ಲೆಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆ 10 ಗಂಟೆಯಿಂದಲೇ ಮಲ್ಟಿಫ್ಲೆಕ್ಸ್ ಗಳಲ್ಲಿ ಶೋಗಳು ಆರಂಭವಾಗಿದೆ. ಬೆಂಗಳೂರಿಲ್ಲೇ 50ಕ್ಕೂ ಹೆಚ್ಚು ಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಗಂಧದ ಗುಡಿ ದಾಖಲಿ ನಿರ್ಮಿಸುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now